Featured

70 ವರ್ಷ ಕಟ್ಟಿದ ದೇಶವನ್ನ 7 ವರ್ಷದಲ್ಲಿ ಹಾಳು ಮಾಡಿದರು : ಬಿಜೆಪಿ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ -Vishwanews24

70 ವರ್ಷ ಕಟ್ಟಿದ ದೇಶವನ್ನ 7 ವರ್ಷದಲ್ಲಿ ಹಾಳು ಮಾಡಿದರು : ಬಿಜೆಪಿ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ -Vishwanews24

ಚಿಕ್ಕೋಡಿ: ಬಿಜೆಪಿ ದೇಶದಲ್ಲಿ ಸುಳ್ಳಿನ ರಾಜಕೀಯ ಮಾಡುತ್ತಲೇ ದೇಶದ ಜನರ ದಾರಿ ತಪ್ಪಿಸುತ್ತಿದೆ. ಬಡವರನ್ನ ಉದ್ದಾರ ಮಾಡುತ್ತೇವೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ದೇಶದ ಬಡವರನ್ನ ಮತ್ತಷ್ಟು ಬಡವರನ್ನಾಗಿಸುತ್ತಿದೆ. ಇದೆ ಬಿಜೆಪಿಯವರ ಅಜೆಂಡಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಬಿಜೆಪಿಯವರೆ ಅತಿ ಹೆಚ್ಚು ಗೋ ಮಾಂಸವನ್ನು ವಿದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಈಗ ಗೋಹತ್ಯೆ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರ ಈ ಕಾಯಿದೆ ಜಾರಿಗೆ ತಂದಿದೆ ಎಂದಿದ್ದಾರೆ. ಬಿಜೆಪಿಯವರು ನೆಹರು ಬಗ್ಗೆ ಟೀಕೆ ಮಾಡುತ್ತಾರೆ. ಆದರೆ, ದೇಶ ಇಷ್ಟು ಪ್ರಗತಿ ಹೊಂದಲು ನೆಹರು ಅವರೇ ಪ್ರಮುಖ ಕಾರಣ ಎನ್ನುವುದನ್ನ ಮರೆತಿದ್ದಾರೆ ಎಂದರು.

ಅವರ ಪರಿಕಲ್ಪನೆ ಪರಿಣಾಮ ದೇಶದಲ್ಲಿ ಖಾಸಗಿ ಸಂಸ್ಥೆಗಳು, ನೀರಾವರಿ ಯೋಜನೆಗಳು, ಡ್ಯಾಂ ನಿರ್ಮಾಣ, ಮೆಡಿಕಲ್ ಕಾಲೇಜುಗಳು, ವಿಮಾನ ನಿಲ್ದಾಣಗಳು ಇವೆಲ್ಲವೂ ನೆಹರು ಅವರ ಪರಿಕಲ್ಪನೆಯ ಕೊಡುಗೆ ಆಗಿದೆ. ಇಷ್ಟೆಲ್ಲಾ ಮಾತನಾಡುವ ಬಿಜೆಪಿಯವರು ಒಂದೇ ಒಂದು ಡ್ಯಾಂ ಕಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯವರು ಏನಿದ್ದರೂ ಸರ್ಜಿಕಲ್ ಸ್ಟ್ರೈಕ್, ಗೋಹತ್ಯೆ, ಲವ್ ಜಿಹಾದ್ ಎನ್ನುತ್ತ ಕಾಲಹರಣ ಮಾಡುವುದೆ ಬಿಜೆಪಿಯವರ ಸಾಧನೆ ಎಂದಿದ್ದಾರೆ. ದೇಶಭಕ್ತಿ ಪ್ರತಿಯೊಬ್ಬರಿಗೂ ಹುಟ್ಟಿನಿಂದಲೆ ಬಂದಿರುತ್ತದೆ ಅದನ್ನು ಯಾರಿಂದಲೂ ಕಲಿಯಬೇಕಿಲ್ಲ. ದೇಶಭಕ್ತಿ ಹೆಸರಿನಲ್ಲಿ ಬಿಜೆಪಿಯವರು ಜನರನ್ನ ಇಬ್ಬಾಗ ಮಾಡಿ ಸುಳ್ಳು ಇತಿಹಾಸ ತಿರುಚಿ ಜನರನ್ನ ಮರಳು ಮಾಡುತ್ತಿದ್ದಾರೆ ಎಂದರು.

70 ವರ್ಷ ಕಟ್ಟಿದ ದೇಶವನ್ನ 7 ವರ್ಷದಲ್ಲಿ ಹಾಳು ಮಾಡಿದರು:

ಕಾಂಗ್ರೆಸ್​​​ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮ ಪಟ್ಟು ಅಭಿವೃದ್ಧಿ ಪಡಿಸಿದ ದೇಶವನ್ನ ಬಿಜೆಪಿಯವರು 7 ವರ್ಷದಲ್ಲಿ ಮಾರಾಟ ಮಾರಾಟ ಮಾಡಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್​​ಎನ್​​ಎಲ್​​ನಂತಹ ಸಂಸ್ಥೆಗಳನ್ನ ಕಾಂಗ್ರೆಸ್ 70 ವರ್ಷಗಳ ಕಾಲ ಕಟ್ಟಿ ಬೆಳಿಸಿತ್ತು. ಆದರೆ, ಅವುಗಳನ್ನ ಇಂದು ಬಿಜೆಪಿ ಮಾರಾಟ ಮಾಡುತ್ತಿದೆ. ಹಣ ಇದ್ದ ಸಿರಿವಂತರನ್ನೆ ಉದ್ದಾರ ಮಾಡುವ ಕೆಲಸ ಬಿಜೆಪಿ ಮಾಡುತ್ತಿದ್ದು, ಬಡವರನ್ನ ಮಾತ್ರ ಬಡವರನ್ನಾಗೆ ಉಳಿಸಿದೆ ಎಂದು ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ ನ ಆಡಳಿತ ಅವಧಿ ಸುವರ್ಣ ಯುಗವಾಗಿತ್ತು. ಆದರೆ, ಬಿಜೆಪಿಯವರು ಮಾತ್ರ ಒಂದೊಂದೆ ಕ್ಷೇತ್ರವನ್ನ ಟಾರ್ಗೆಟ್ ಮಾಡಿಕೊಂಡು ಉದ್ಯಮಿಗಳ ಪಾಲು ಮಾಡುತ್ತಿದ್ದಾರೆ. ಎಲ್ಲವನ್ನೂ ಮಾರಾಟ ಮಾಡಿ ನಾವು ದೇಶಭಕ್ತರು ಎನ್ನುವುದನ್ನ ಮಾತ್ತ ಬಿಡುತ್ತಿಲ್ಲ.ಪ್ರಧಾನಮಂತ್ರಿ ರಾತ್ರಿ 8 ಗಂಟೆಗೆ ಟಿವಿಯಲ್ಲಿ ಬರುತ್ತಾರೆ ಅಂದ್ರೆ ಏನೊ ಕಂಟಕ ಕಾದಿದೆ ಅನ್ನುವ ಹಾಗಾಗಿದೆ. ಸದ್ಯ ರೈತರು ಅವರ ಮುಂದಿನ ಗುರಿಯಾಗಿದ್ದಾರೆ ತಮ್ಮ ಹಕ್ಕುಗಳಿಗಾಗಿ ಬೀದಿಯಲ್ಲಿ ಹೋರಾಟ ಮಾಡುತ್ತಿರುವ ಅನ್ನದಾತರಿಗು ದೇಶದ್ರೋಹದ ಪಟ್ಟ ಕಟ್ಟುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

17 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

18 hours ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

19 hours ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

20 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

20 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

20 hours ago