ಚಿಕ್ಕೋಡಿ: ಬಿಜೆಪಿ ದೇಶದಲ್ಲಿ ಸುಳ್ಳಿನ ರಾಜಕೀಯ ಮಾಡುತ್ತಲೇ ದೇಶದ ಜನರ ದಾರಿ ತಪ್ಪಿಸುತ್ತಿದೆ. ಬಡವರನ್ನ ಉದ್ದಾರ ಮಾಡುತ್ತೇವೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ದೇಶದ ಬಡವರನ್ನ ಮತ್ತಷ್ಟು ಬಡವರನ್ನಾಗಿಸುತ್ತಿದೆ. ಇದೆ ಬಿಜೆಪಿಯವರ ಅಜೆಂಡಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಬಿಜೆಪಿಯವರೆ ಅತಿ ಹೆಚ್ಚು ಗೋ ಮಾಂಸವನ್ನು ವಿದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಈಗ ಗೋಹತ್ಯೆ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರ ಈ ಕಾಯಿದೆ ಜಾರಿಗೆ ತಂದಿದೆ ಎಂದಿದ್ದಾರೆ. ಬಿಜೆಪಿಯವರು ನೆಹರು ಬಗ್ಗೆ ಟೀಕೆ ಮಾಡುತ್ತಾರೆ. ಆದರೆ, ದೇಶ ಇಷ್ಟು ಪ್ರಗತಿ ಹೊಂದಲು ನೆಹರು ಅವರೇ ಪ್ರಮುಖ ಕಾರಣ ಎನ್ನುವುದನ್ನ ಮರೆತಿದ್ದಾರೆ ಎಂದರು.
ಅವರ ಪರಿಕಲ್ಪನೆ ಪರಿಣಾಮ ದೇಶದಲ್ಲಿ ಖಾಸಗಿ ಸಂಸ್ಥೆಗಳು, ನೀರಾವರಿ ಯೋಜನೆಗಳು, ಡ್ಯಾಂ ನಿರ್ಮಾಣ, ಮೆಡಿಕಲ್ ಕಾಲೇಜುಗಳು, ವಿಮಾನ ನಿಲ್ದಾಣಗಳು ಇವೆಲ್ಲವೂ ನೆಹರು ಅವರ ಪರಿಕಲ್ಪನೆಯ ಕೊಡುಗೆ ಆಗಿದೆ. ಇಷ್ಟೆಲ್ಲಾ ಮಾತನಾಡುವ ಬಿಜೆಪಿಯವರು ಒಂದೇ ಒಂದು ಡ್ಯಾಂ ಕಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿಯವರು ಏನಿದ್ದರೂ ಸರ್ಜಿಕಲ್ ಸ್ಟ್ರೈಕ್, ಗೋಹತ್ಯೆ, ಲವ್ ಜಿಹಾದ್ ಎನ್ನುತ್ತ ಕಾಲಹರಣ ಮಾಡುವುದೆ ಬಿಜೆಪಿಯವರ ಸಾಧನೆ ಎಂದಿದ್ದಾರೆ. ದೇಶಭಕ್ತಿ ಪ್ರತಿಯೊಬ್ಬರಿಗೂ ಹುಟ್ಟಿನಿಂದಲೆ ಬಂದಿರುತ್ತದೆ ಅದನ್ನು ಯಾರಿಂದಲೂ ಕಲಿಯಬೇಕಿಲ್ಲ. ದೇಶಭಕ್ತಿ ಹೆಸರಿನಲ್ಲಿ ಬಿಜೆಪಿಯವರು ಜನರನ್ನ ಇಬ್ಬಾಗ ಮಾಡಿ ಸುಳ್ಳು ಇತಿಹಾಸ ತಿರುಚಿ ಜನರನ್ನ ಮರಳು ಮಾಡುತ್ತಿದ್ದಾರೆ ಎಂದರು.
70 ವರ್ಷ ಕಟ್ಟಿದ ದೇಶವನ್ನ 7 ವರ್ಷದಲ್ಲಿ ಹಾಳು ಮಾಡಿದರು:
ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮ ಪಟ್ಟು ಅಭಿವೃದ್ಧಿ ಪಡಿಸಿದ ದೇಶವನ್ನ ಬಿಜೆಪಿಯವರು 7 ವರ್ಷದಲ್ಲಿ ಮಾರಾಟ ಮಾರಾಟ ಮಾಡಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ಎಲ್ನಂತಹ ಸಂಸ್ಥೆಗಳನ್ನ ಕಾಂಗ್ರೆಸ್ 70 ವರ್ಷಗಳ ಕಾಲ ಕಟ್ಟಿ ಬೆಳಿಸಿತ್ತು. ಆದರೆ, ಅವುಗಳನ್ನ ಇಂದು ಬಿಜೆಪಿ ಮಾರಾಟ ಮಾಡುತ್ತಿದೆ. ಹಣ ಇದ್ದ ಸಿರಿವಂತರನ್ನೆ ಉದ್ದಾರ ಮಾಡುವ ಕೆಲಸ ಬಿಜೆಪಿ ಮಾಡುತ್ತಿದ್ದು, ಬಡವರನ್ನ ಮಾತ್ರ ಬಡವರನ್ನಾಗೆ ಉಳಿಸಿದೆ ಎಂದು ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ನ ಆಡಳಿತ ಅವಧಿ ಸುವರ್ಣ ಯುಗವಾಗಿತ್ತು. ಆದರೆ, ಬಿಜೆಪಿಯವರು ಮಾತ್ರ ಒಂದೊಂದೆ ಕ್ಷೇತ್ರವನ್ನ ಟಾರ್ಗೆಟ್ ಮಾಡಿಕೊಂಡು ಉದ್ಯಮಿಗಳ ಪಾಲು ಮಾಡುತ್ತಿದ್ದಾರೆ. ಎಲ್ಲವನ್ನೂ ಮಾರಾಟ ಮಾಡಿ ನಾವು ದೇಶಭಕ್ತರು ಎನ್ನುವುದನ್ನ ಮಾತ್ತ ಬಿಡುತ್ತಿಲ್ಲ.ಪ್ರಧಾನಮಂತ್ರಿ ರಾತ್ರಿ 8 ಗಂಟೆಗೆ ಟಿವಿಯಲ್ಲಿ ಬರುತ್ತಾರೆ ಅಂದ್ರೆ ಏನೊ ಕಂಟಕ ಕಾದಿದೆ ಅನ್ನುವ ಹಾಗಾಗಿದೆ. ಸದ್ಯ ರೈತರು ಅವರ ಮುಂದಿನ ಗುರಿಯಾಗಿದ್ದಾರೆ ತಮ್ಮ ಹಕ್ಕುಗಳಿಗಾಗಿ ಬೀದಿಯಲ್ಲಿ ಹೋರಾಟ ಮಾಡುತ್ತಿರುವ ಅನ್ನದಾತರಿಗು ದೇಶದ್ರೋಹದ ಪಟ್ಟ ಕಟ್ಟುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…