Featured

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

ನವದೆಹಲಿ : ಭಾರತದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಅನೇಕ ದೇಶಗಳ ಗಣ್ಯರು ಭಾರತದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯನ್ನಾಗಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್‌ನಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯ ಪ್ರಭಾವ ಹೆಚ್ಚಾದ ಕಾರಣ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದರು. ಹೀಗಾಗಿ ಸಮಾರಂಭಕ್ಕೆ ಗೈರು ಹಾಜರಾದರೂ ಅವರು ಭಾರತಕ್ಕೆ ಸಂದೇಶ ರವಾನಿಸಿದ್ದಾರೆ.

‘ಇಂದು ಭಾರತವು ಗಣರಾಜ್ಯೋತ್ಸವ ದಿನ ಆಚರಿಸುತ್ತಿದೆ. ಭಾರತ ವಿಶ್ವದ ಅತಿದೊಡ್ಡ ಸಾರ್ವಭೌಮ ಪ್ರಜಾಪ್ರಭುತ್ವದ ದೇಶವಾಗಿದ್ದು, ಅಸಾಧಾರಣ ಸಂವಿಧಾನವನ್ನು ಹೊಂದಿದೆ. ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಅವರು ಹೇಳಿದ್ದಾರೆ.

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಈ ವರ್ಷ ಮುಂದಿನ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲು ಕಾತರನಾಗಿದ್ದೇನೆ. ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಒಬ್ಬರೂ ಪ್ರತಿಜ್ಞೆಗೈದಿರುವಂತೆ ನಮ್ಮ ಸ್ನೇಹ ಮತ್ತು ಸಂಬಂಧವನ್ನು ಬಲಪಡಿಸುವ, ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.

ನಮ್ಮ ಎರಡು ದೇಶಗಳು ಈ ಪಿಡುಗಿನಿಂದ ಮನುಕುಲವನ್ನು ಮುಕ್ತಗೊಳಿಸಲು ಲಸಿಕೆಯ ಅಭಿವೃದ್ಧಿ, ಉತ್ಪಾದನೆ ಮತ್ತು ಹಂಚಿಕೆಗಳ ವಿಚಾರದಲ್ಲಿ ಜತೆಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ಬ್ರಿಟನ್, ಭಾರತ ಮತ್ತು ಇತರೆ ದೇಶಗಳ ಸಂಯೋಜಿತ ಪ್ರಯತ್ನದ ಫಲವಾಗಿ ನಾವು ಕೋವಿಡ್ ವಿರುದ್ಧ ಯಶಸ್ಸಿನ ಹಾದಿಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago