Featured

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

ನವದೆಹಲಿ : ಭಾರತದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಅನೇಕ ದೇಶಗಳ ಗಣ್ಯರು ಭಾರತದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯನ್ನಾಗಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್‌ನಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯ ಪ್ರಭಾವ ಹೆಚ್ಚಾದ ಕಾರಣ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದರು. ಹೀಗಾಗಿ ಸಮಾರಂಭಕ್ಕೆ ಗೈರು ಹಾಜರಾದರೂ ಅವರು ಭಾರತಕ್ಕೆ ಸಂದೇಶ ರವಾನಿಸಿದ್ದಾರೆ.

‘ಇಂದು ಭಾರತವು ಗಣರಾಜ್ಯೋತ್ಸವ ದಿನ ಆಚರಿಸುತ್ತಿದೆ. ಭಾರತ ವಿಶ್ವದ ಅತಿದೊಡ್ಡ ಸಾರ್ವಭೌಮ ಪ್ರಜಾಪ್ರಭುತ್ವದ ದೇಶವಾಗಿದ್ದು, ಅಸಾಧಾರಣ ಸಂವಿಧಾನವನ್ನು ಹೊಂದಿದೆ. ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಅವರು ಹೇಳಿದ್ದಾರೆ.

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಈ ವರ್ಷ ಮುಂದಿನ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲು ಕಾತರನಾಗಿದ್ದೇನೆ. ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಒಬ್ಬರೂ ಪ್ರತಿಜ್ಞೆಗೈದಿರುವಂತೆ ನಮ್ಮ ಸ್ನೇಹ ಮತ್ತು ಸಂಬಂಧವನ್ನು ಬಲಪಡಿಸುವ, ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.

ನಮ್ಮ ಎರಡು ದೇಶಗಳು ಈ ಪಿಡುಗಿನಿಂದ ಮನುಕುಲವನ್ನು ಮುಕ್ತಗೊಳಿಸಲು ಲಸಿಕೆಯ ಅಭಿವೃದ್ಧಿ, ಉತ್ಪಾದನೆ ಮತ್ತು ಹಂಚಿಕೆಗಳ ವಿಚಾರದಲ್ಲಿ ಜತೆಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ಬ್ರಿಟನ್, ಭಾರತ ಮತ್ತು ಇತರೆ ದೇಶಗಳ ಸಂಯೋಜಿತ ಪ್ರಯತ್ನದ ಫಲವಾಗಿ ನಾವು ಕೋವಿಡ್ ವಿರುದ್ಧ ಯಶಸ್ಸಿನ ಹಾದಿಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

11 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

12 hours ago