ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.
ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿದೆ.
ಮುಂಭಾಗದಲ್ಲಿ ಹೆರಿಗೆ ತಜ್ಞೆ ಸೂಲಗಿತ್ತಿ ನರಸಮ್ಮ ಚಿತ್ರ, ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಚಿತ್ರ ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತಹ ಚಿತ್ರ ಪ್ರದರ್ಶನಗೊಂಡಿದೆ.
ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಹೆರಿಗೆ ತಜ್ಞೆ- ಸೂಲಗಿತ್ತಿ ನರಸಮ್ಮ, ಹಾಲಕ್ಕಿ ಸಮುದಾಯದ ವೃಕ್ಷ ಮಾತೆ- ತುಳಸಿ ಗೌಡ, ಪರಿಸರ ಪ್ರೇಮಿ- ಸಾಲುಮರದ ತಿಮ್ಮಕ್ಕ ಮೂವರು ಸಮಾಜಕ್ಕೆ ನಿಸ್ವಾರ್ಥ ಕೊಡುಗೆ ನೀಡಿ ಹೆಸರುವಾಸಿಯಾಗಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…