Featured

74ನೇ ಗಣರಾಜ್ಯೋತ್ಸವ: ಪರೇಡ್’ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ – Vishwanews24

74ನೇ ಗಣರಾಜ್ಯೋತ್ಸವ: ಪರೇಡ್’ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ

ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.

ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿದೆ.

ಮುಂಭಾಗದಲ್ಲಿ ಹೆರಿಗೆ ತಜ್ಞೆ ಸೂಲಗಿತ್ತಿ ನರಸಮ್ಮ ಚಿತ್ರ, ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಚಿತ್ರ ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತಹ ಚಿತ್ರ ಪ್ರದರ್ಶನಗೊಂಡಿದೆ.

ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಹೆರಿಗೆ ತಜ್ಞೆ- ಸೂಲಗಿತ್ತಿ ನರಸಮ್ಮ, ಹಾಲಕ್ಕಿ ಸಮುದಾಯದ ವೃಕ್ಷ ಮಾತೆ- ತುಳಸಿ ಗೌಡ, ಪರಿಸರ ಪ್ರೇಮಿ- ಸಾಲುಮರದ ತಿಮ್ಮಕ್ಕ ಮೂವರು ಸಮಾಜಕ್ಕೆ ನಿಸ್ವಾರ್ಥ ಕೊಡುಗೆ ನೀಡಿ ಹೆಸರುವಾಸಿಯಾಗಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago