ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಹು ಸ್ತರದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಎನ್ಎಸ್ಜಿ ಸ್ನೈಪರ್ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ರೈಲ್ವೆ ನಿಲ್ದಾಣಗಳ ಸುತ್ತಮುತ್ತವೂ ಬಂದೋಬಸ್ತ್ ಹೆಚ್ಚಿಸಲಾಗಿದೆ. ಕೆಂಪುಕೋಟೆ ಸಮೀಪದ ರೈಲು ಮಾರ್ಗಗಳಲ್ಲಿ ಬೆಳಿಗ್ಗೆ 6.45ರಿಂದ 8.45ರ ಅವಧಿಯಲ್ಲಿ ರೈಲು ಸಂಚಾರವಿದೆ. ಹೀಗಾಗಿ ಹಳಿಗಳ ಬಳಿಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತದೆ ಎಂದು ಡಿಸಿಪಿ ಹರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಲಿನ ಪ್ರದೇಶಗಳ ಹೋಟೆಲ್ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದೂ ಅವರು ಈಗಾಗಲೇ ತಿಳಿಸಿದ್ದಾರೆ.
ಕೋವಿಡ್-19 ಲಕ್ಷಣ ಹೊಂದಿದ್ದವರು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮತ್ತು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ತಾಲೀಮು ನಡೆಸಿದ್ದವು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…