Featured

8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ  ಬಸ್ ಸಂಚಾರ ಮತ್ತೆ ಆರಂಭ – vishwanews24

8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ  ಬಸ್ ಸಂಚಾರ ಮತ್ತೆ ಆರಂಭ

ಮುಳ್ಳಿಕಟ್ಟೆ : ಕಳೆದ 8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಕೆಎಸ್ ಆರ್‌ಟಿಸಿ ಬಸ್ ಬುಧವಾರದಿಂದ ಮತ್ತೆ ಸಂಚಾರ ಆರಂಭಿಸಿದೆ. ಆ ಮೂಲಕ ಗ್ರಾಮೀಣ ಭಾಗದ ಜನರಿಗೆ, ಶಾಲಾ – ಕಾಲೇಜು ಮಕ್ಕಳಿಗೆ ಕುಂದಾಪುರ ಸಹಿತ ನಗರ ಭಾಗಕ್ಕೆ ಬರಲು ಅನುಕೂಲವಾಗಲಿದೆ. ಕುಂದಾಪುರದಿಂದ ತ್ರಾಸಿ, ಮೊವಾಡಿ, ನಾಡ, ಕೊಮೆ, ಬಡಾಕೆರೆಗೆ ಸಂಚರಿಸುವ ಈ ಬಸ್ ಸಂಚಾರವು ಕಳೆದ ಎ.4 ರಿಂದ ಸ್ಥಗಿತಗೊಂಡಿತ್ತು. ಈ ಬಸ್ ಸಂಚಾರಕ್ಕೆ ಇಲ್ಲಿನ ಸಂಘಟನೆಗಳು, ಊರವರು ಅನೇಕ ಸಮಯದಿಂದ ಹೋರಾಟ ಮಾಡಿದ್ದಲ್ಲದೆ, ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು. ಈಗ ಈ ಬಸ್ ಸಂಚಾರ ಆರಂಭಗೊಂಡಿದ್ದರಿಂದ ಇಲ್ಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಬಸ್ ಗೆ ಊರವರ ಸ್ವಾಗತ
ಬುಧವಾರ ಕುಂದಾಪುರದಿಂದ ನಾಡ ಕಡೆಗೆ ಬಂದ ಈ ಬಸ್ಸನ್ನು ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ, ಡಿವೈಎಫ್ ಐ ಪಡುಕೋಣೆ ಘಟಕದ ಎಲ್ಲ ಸದಸ್ಯರು, ಜನವಾದಿ ಮಹಿಳಾ ಸಂಘಟನೆಯ ಸದಸ್ಯರು, ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘಟನೆಯ ಸದಸ್ಯರು, ಶಾಲಾ – ಕಾಲೇಜು ಮಕ್ಕಳು, ಊರವರು
ಕಳೆದ 8 ತಿಂಗಳಿಂದ ನಡೆಸುತ್ತಿದ್ದ ನಮ್ಮ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇದರಿಂದ ರಾಜ್ಯ ಸರಕಾರದ ಶಕ್ತಿ ಯೋಜನೆಯ ಪ್ರಯೋಜನ ಈ ಭಾಗದ ಮಹಿಳೆಯರಿಗೂ ಸಿಗಲಿದೆ.

ಶಾಲಾ – ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಪ್ರಯೋಜನ ಆಗಲಿದೆ. ಅಧಿಕಾರಿಗಳೆಲ್ಲರಿಗೂ ನಮ್ಮ ಕೃತಜ್ಞತೆಗಳು ಎನ್ನುವುದಾಗಿ ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago