ಮುಳ್ಳಿಕಟ್ಟೆ : ಕಳೆದ 8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಕೆಎಸ್ ಆರ್ಟಿಸಿ ಬಸ್ ಬುಧವಾರದಿಂದ ಮತ್ತೆ ಸಂಚಾರ ಆರಂಭಿಸಿದೆ. ಆ ಮೂಲಕ ಗ್ರಾಮೀಣ ಭಾಗದ ಜನರಿಗೆ, ಶಾಲಾ – ಕಾಲೇಜು ಮಕ್ಕಳಿಗೆ ಕುಂದಾಪುರ ಸಹಿತ ನಗರ ಭಾಗಕ್ಕೆ ಬರಲು ಅನುಕೂಲವಾಗಲಿದೆ. ಕುಂದಾಪುರದಿಂದ ತ್ರಾಸಿ, ಮೊವಾಡಿ, ನಾಡ, ಕೊಮೆ, ಬಡಾಕೆರೆಗೆ ಸಂಚರಿಸುವ ಈ ಬಸ್ ಸಂಚಾರವು ಕಳೆದ ಎ.4 ರಿಂದ ಸ್ಥಗಿತಗೊಂಡಿತ್ತು. ಈ ಬಸ್ ಸಂಚಾರಕ್ಕೆ ಇಲ್ಲಿನ ಸಂಘಟನೆಗಳು, ಊರವರು ಅನೇಕ ಸಮಯದಿಂದ ಹೋರಾಟ ಮಾಡಿದ್ದಲ್ಲದೆ, ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು. ಈಗ ಈ ಬಸ್ ಸಂಚಾರ ಆರಂಭಗೊಂಡಿದ್ದರಿಂದ ಇಲ್ಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಬಸ್ ಗೆ ಊರವರ ಸ್ವಾಗತ
ಬುಧವಾರ ಕುಂದಾಪುರದಿಂದ ನಾಡ ಕಡೆಗೆ ಬಂದ ಈ ಬಸ್ಸನ್ನು ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ, ಡಿವೈಎಫ್ ಐ ಪಡುಕೋಣೆ ಘಟಕದ ಎಲ್ಲ ಸದಸ್ಯರು, ಜನವಾದಿ ಮಹಿಳಾ ಸಂಘಟನೆಯ ಸದಸ್ಯರು, ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘಟನೆಯ ಸದಸ್ಯರು, ಶಾಲಾ – ಕಾಲೇಜು ಮಕ್ಕಳು, ಊರವರು
ಕಳೆದ 8 ತಿಂಗಳಿಂದ ನಡೆಸುತ್ತಿದ್ದ ನಮ್ಮ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇದರಿಂದ ರಾಜ್ಯ ಸರಕಾರದ ಶಕ್ತಿ ಯೋಜನೆಯ ಪ್ರಯೋಜನ ಈ ಭಾಗದ ಮಹಿಳೆಯರಿಗೂ ಸಿಗಲಿದೆ.
ಶಾಲಾ – ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಪ್ರಯೋಜನ ಆಗಲಿದೆ. ಅಧಿಕಾರಿಗಳೆಲ್ಲರಿಗೂ ನಮ್ಮ ಕೃತಜ್ಞತೆಗಳು ಎನ್ನುವುದಾಗಿ ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…