ಆಂಧ್ರಪ್ರದೇಶ : ಮೂರನೇ ತರಗತಿಯ ಬಾಲಕಿಯ ಮೇಲೆ ಮೂವರು ಬಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿ ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.
ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್ಮರಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೂವರು ಬಾಲಕರು ಸೇರಿ ಶಾಲಾ ರಜಾದಿನವಾದ ಭಾನುವಾರ ಈ ಕೃತ್ಯವೆಸಗಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಪಾರ್ಕ್ನಲ್ಲಿ ಆಟವಾಡುತ್ತಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಭಾನುವಾರ ದೂರು ದಾಖಲಿಸಿದ್ದರು.
ಮುಚುಮರಿ ಪಾರ್ಕ್ನಲ್ಲಿ ಬಾಲಕಿ ಆಟವಾಡುತ್ತಿರುವುದನ್ನು ಗಮನಿಸಿದ ದುರುಳ ಬಾಲಕರು ಆಕೆಯನ್ನು ತಮ್ಮೊಂದಿಗೆ ಆಟವಾಡಲು ಬರುವಂತೆ ಕರೆದಿದ್ದಾರೆ. ಬಳಿಕ ನೀರಾವರಿ ಯೋಜನೆಯ ಸಮೀಪದ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಆಕೆಯ ಬಾಯನ್ನು ಬಟ್ಟೆಯಿಂದ ಗಟ್ಟಿಯಾಗಿ ಕಟ್ಟಿ ಒಬ್ಬರಾದ ಮೇಲೊಬ್ಬರಂತೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದಾದ ನಂತರ ಬಾಲಕರಿಗೆ ಆಕೆ ತನ್ನ ಪೋಷಕರಿಗೆ ತಮ್ಮ ಬಗ್ಗೆ ಹೇಳಿದರೆ ಎಂಬ ಭಯ ಶುರುವಾಗಿದೆ. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ ಪಾಪಿಗಳು ಬಳಿಕ ಆಕೆಯ ದೇಹವನ್ನು ನೀರಿಗೆ ಎಸೆದು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ.
ಮುಚ್ಚುಮರ್ರಿ ಪಾರ್ಕ್ನಲ್ಲಿ ಪೊಲೀಸರು , ಪೋಷಕರೆಲ್ಲರೂ ಹುಡುಕಾಟ ನಡೆಸಿದ್ದರು, ಆದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಸ್ನಿಫರ್ ಡಾಗ್ನ್ನು ಕರೆದುಕೊಂಡು ಬರಲಾಯಿತು. ನಾಯಿಯ ಸುಳಿವು ಪೊಲೀಸರನ್ನು ಮೂವರು ಅಪ್ರಾಪ್ತ ಬಾಲಕರ ನಿವಾಸಗಳಿಗೆ ಕರೆದೊಯ್ಯಿತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…