ಆಂಧ್ರಪ್ರದೇಶ : ಮೂರನೇ ತರಗತಿಯ ಬಾಲಕಿಯ ಮೇಲೆ ಮೂವರು ಬಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿ ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.
ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್ಮರಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೂವರು ಬಾಲಕರು ಸೇರಿ ಶಾಲಾ ರಜಾದಿನವಾದ ಭಾನುವಾರ ಈ ಕೃತ್ಯವೆಸಗಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಪಾರ್ಕ್ನಲ್ಲಿ ಆಟವಾಡುತ್ತಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಭಾನುವಾರ ದೂರು ದಾಖಲಿಸಿದ್ದರು.
ಮುಚುಮರಿ ಪಾರ್ಕ್ನಲ್ಲಿ ಬಾಲಕಿ ಆಟವಾಡುತ್ತಿರುವುದನ್ನು ಗಮನಿಸಿದ ದುರುಳ ಬಾಲಕರು ಆಕೆಯನ್ನು ತಮ್ಮೊಂದಿಗೆ ಆಟವಾಡಲು ಬರುವಂತೆ ಕರೆದಿದ್ದಾರೆ. ಬಳಿಕ ನೀರಾವರಿ ಯೋಜನೆಯ ಸಮೀಪದ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಆಕೆಯ ಬಾಯನ್ನು ಬಟ್ಟೆಯಿಂದ ಗಟ್ಟಿಯಾಗಿ ಕಟ್ಟಿ ಒಬ್ಬರಾದ ಮೇಲೊಬ್ಬರಂತೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದಾದ ನಂತರ ಬಾಲಕರಿಗೆ ಆಕೆ ತನ್ನ ಪೋಷಕರಿಗೆ ತಮ್ಮ ಬಗ್ಗೆ ಹೇಳಿದರೆ ಎಂಬ ಭಯ ಶುರುವಾಗಿದೆ. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ ಪಾಪಿಗಳು ಬಳಿಕ ಆಕೆಯ ದೇಹವನ್ನು ನೀರಿಗೆ ಎಸೆದು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ.
ಮುಚ್ಚುಮರ್ರಿ ಪಾರ್ಕ್ನಲ್ಲಿ ಪೊಲೀಸರು , ಪೋಷಕರೆಲ್ಲರೂ ಹುಡುಕಾಟ ನಡೆಸಿದ್ದರು, ಆದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಸ್ನಿಫರ್ ಡಾಗ್ನ್ನು ಕರೆದುಕೊಂಡು ಬರಲಾಯಿತು. ನಾಯಿಯ ಸುಳಿವು ಪೊಲೀಸರನ್ನು ಮೂವರು ಅಪ್ರಾಪ್ತ ಬಾಲಕರ ನಿವಾಸಗಳಿಗೆ ಕರೆದೊಯ್ಯಿತು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…