8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ  ಬಸ್ ಸಂಚಾರ ಮತ್ತೆ ಆರಂಭ – vishwanews24

Featured, ಉಡುಪಿ

8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ  ಬಸ್ ಸಂಚಾರ ಮತ್ತೆ ಆರಂಭ

ಮುಳ್ಳಿಕಟ್ಟೆ : ಕಳೆದ 8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಕೆಎಸ್ ಆರ್‌ಟಿಸಿ ಬಸ್ ಬುಧವಾರದಿಂದ ಮತ್ತೆ ಸಂಚಾರ ಆರಂಭಿಸಿದೆ. ಆ ಮೂಲಕ ಗ್ರಾಮೀಣ ಭಾಗದ ಜನರಿಗೆ, ಶಾಲಾ – ಕಾಲೇಜು ಮಕ್ಕಳಿಗೆ ಕುಂದಾಪುರ ಸಹಿತ ನಗರ ಭಾಗಕ್ಕೆ ಬರಲು ಅನುಕೂಲವಾಗಲಿದೆ. ಕುಂದಾಪುರದಿಂದ ತ್ರಾಸಿ, ಮೊವಾಡಿ, ನಾಡ, ಕೊಮೆ, ಬಡಾಕೆರೆಗೆ ಸಂಚರಿಸುವ ಈ ಬಸ್ ಸಂಚಾರವು ಕಳೆದ ಎ.4 ರಿಂದ ಸ್ಥಗಿತಗೊಂಡಿತ್ತು. ಈ ಬಸ್ ಸಂಚಾರಕ್ಕೆ ಇಲ್ಲಿನ ಸಂಘಟನೆಗಳು, ಊರವರು ಅನೇಕ ಸಮಯದಿಂದ ಹೋರಾಟ ಮಾಡಿದ್ದಲ್ಲದೆ, ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು. ಈಗ ಈ ಬಸ್ ಸಂಚಾರ ಆರಂಭಗೊಂಡಿದ್ದರಿಂದ ಇಲ್ಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

5 ವರ್ಷ ನನ್ನ ತಂದೆಯೇ ಮುಖ್ಯಮಂತ್ರಿ ಆಗಿರುತ್ತಾರೆ ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ  – vishwanews24

ಬಸ್ ಗೆ ಊರವರ ಸ್ವಾಗತ
ಬುಧವಾರ ಕುಂದಾಪುರದಿಂದ ನಾಡ ಕಡೆಗೆ ಬಂದ ಈ ಬಸ್ಸನ್ನು ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ, ಡಿವೈಎಫ್ ಐ ಪಡುಕೋಣೆ ಘಟಕದ ಎಲ್ಲ ಸದಸ್ಯರು, ಜನವಾದಿ ಮಹಿಳಾ ಸಂಘಟನೆಯ ಸದಸ್ಯರು, ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘಟನೆಯ ಸದಸ್ಯರು, ಶಾಲಾ – ಕಾಲೇಜು ಮಕ್ಕಳು, ಊರವರು
ಕಳೆದ 8 ತಿಂಗಳಿಂದ ನಡೆಸುತ್ತಿದ್ದ ನಮ್ಮ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇದರಿಂದ ರಾಜ್ಯ ಸರಕಾರದ ಶಕ್ತಿ ಯೋಜನೆಯ ಪ್ರಯೋಜನ ಈ ಭಾಗದ ಮಹಿಳೆಯರಿಗೂ ಸಿಗಲಿದೆ.

ಶಾಲಾ – ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಪ್ರಯೋಜನ ಆಗಲಿದೆ. ಅಧಿಕಾರಿಗಳೆಲ್ಲರಿಗೂ ನಮ್ಮ ಕೃತಜ್ಞತೆಗಳು ಎನ್ನುವುದಾಗಿ ನಾಡ ಗ್ರಾ.ಪಂ. ಸದಸ್ಯ ರಾಜೀವ ಪಡುಕೋಣೆ ಹೇಳಿದ್ದಾರೆ.

ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

Leave a Reply