Featured

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ -Vishwanews24

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ ..

ಇವರು ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ..

ಚಿಕ್ಕೋಡಿ: ಗಣೇಶನ ಮೂರ್ತಿಗಳನ್ನು ತಯಾರಿಸುತ್ತಿರುವ ಮುಸ್ಲಿಂ ಕುಟುಂಬ ಗಡಿನಾಡಿನಲ್ಲಿ ಕೋಮು ಸೌಹಾರ್ದತೆ ಸಂದೇಶ ಸಾರುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಎಂಬ ಪುಟ್ಟ ಗ್ರಾಮವೊಂದರಲ್ಲಿ ಅಲ್ಲಾಬಕ್ಷ ಜಮಾದಾರ ಎಂಬ ಮುಸ್ಲಿಂ ಕುಟುಂಬ ಕಳೆದ 80 ವರ್ಷಗಳಿಂದ ಗಣೇಶ ಮೂರ್ತಿ ತಯಾರಿಸಿ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಕೋಮು ಸೌಹಾರ್ದ ಸಂದೇಶ ಸಾರುತ್ತಿದ್ದಾರೆ. ಗ್ರಾಮದ ಅಲ್ಲಾಬಕ್ಷ ಜಮಾದಾರ ಕುಟುಂಬ ಪ್ರತಿ ವರ್ಷ ನೂರಾರು ಗಣಪತಿ ಮೂರ್ತಿ ತಯಾರಿಸಿ ಭಕ್ತಾಧಿಗಳಿಗೆ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ.

ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರಾಗಿರುವ ಅಲ್ಲಾಬಕ್ಷ ಜಮಾದಾರ ಅವರು ತಮ್ಮ ಬಿಡುವಿನ ಸಮಯದಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಜಾತಿ-ಭೇದಭಾವ ಬದಿಗಿಟ್ಟು ತಲೆಗೆ ಟೋಪಿ ಧರಿಸಿ ಝಗಮಗಿಸುವ ಬಣ್ಣ ಬಣ್ಣಗಳಿಂದ ವಿಘ್ನೇಶ್ವರ ಮೂರ್ತಿ ತಯಾರಿಸುತ್ತಿದ್ದಾರೆ.

ಜಮಾದಾರ ಕುಟುಂಬ ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರ, ಯಡೂರವಾಡಿ, ಶಿರಗುಪ್ಪಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಭಕ್ತರು ಗಣೇಶ ಮೂರ್ತಿಗಳನ್ನು ಪೂಜೆಗೆ ತೆಗೆದುಕೊಂಡು ಹೋಗುತ್ತಾರೆ. ಪ್ರಸಕ್ತ ವರ್ಷದಲ್ಲಿ ಜಮಾದಾರ ಕುಟುಂಬ ಸುಮಾರು 250ರಿಂದ 300 ಗಣೇಶ ಮೂರ್ತಿಗಳನ್ನು ತಯಾರಿಸಿದ್ದು, ಗಣೇಶ ಚೌತಿ ಹಬ್ಬದ ಮುನ್ನಾ ದಿನ ಗಣೇಶ ಮೂರ್ತಿಗಳ ಅಂತಿಮ ಕೆಲಸ ಮುಕ್ತಾಯವಾಗಲಿದೆ. ಒಟ್ಟಾರೆಯಾಗಿ ಜಾತಿ ಧರ್ಮ ಎಂದು ಬಡಿದಾಡುವರ ನಡುವೆ ಜಮಾದಾರ ಕುಟುಂಬ ಸಮಾಜಕ್ಕೆ ಮಾದರಿಯಾಗಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

11 minutes ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

18 minutes ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

2 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

4 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

4 hours ago