Featured

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ -Vishwanews24

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ ..

ಇವರು ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ..

ಚಿಕ್ಕೋಡಿ: ಗಣೇಶನ ಮೂರ್ತಿಗಳನ್ನು ತಯಾರಿಸುತ್ತಿರುವ ಮುಸ್ಲಿಂ ಕುಟುಂಬ ಗಡಿನಾಡಿನಲ್ಲಿ ಕೋಮು ಸೌಹಾರ್ದತೆ ಸಂದೇಶ ಸಾರುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಎಂಬ ಪುಟ್ಟ ಗ್ರಾಮವೊಂದರಲ್ಲಿ ಅಲ್ಲಾಬಕ್ಷ ಜಮಾದಾರ ಎಂಬ ಮುಸ್ಲಿಂ ಕುಟುಂಬ ಕಳೆದ 80 ವರ್ಷಗಳಿಂದ ಗಣೇಶ ಮೂರ್ತಿ ತಯಾರಿಸಿ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಕೋಮು ಸೌಹಾರ್ದ ಸಂದೇಶ ಸಾರುತ್ತಿದ್ದಾರೆ. ಗ್ರಾಮದ ಅಲ್ಲಾಬಕ್ಷ ಜಮಾದಾರ ಕುಟುಂಬ ಪ್ರತಿ ವರ್ಷ ನೂರಾರು ಗಣಪತಿ ಮೂರ್ತಿ ತಯಾರಿಸಿ ಭಕ್ತಾಧಿಗಳಿಗೆ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ.

ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರಾಗಿರುವ ಅಲ್ಲಾಬಕ್ಷ ಜಮಾದಾರ ಅವರು ತಮ್ಮ ಬಿಡುವಿನ ಸಮಯದಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಜಾತಿ-ಭೇದಭಾವ ಬದಿಗಿಟ್ಟು ತಲೆಗೆ ಟೋಪಿ ಧರಿಸಿ ಝಗಮಗಿಸುವ ಬಣ್ಣ ಬಣ್ಣಗಳಿಂದ ವಿಘ್ನೇಶ್ವರ ಮೂರ್ತಿ ತಯಾರಿಸುತ್ತಿದ್ದಾರೆ.

ಜಮಾದಾರ ಕುಟುಂಬ ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರ, ಯಡೂರವಾಡಿ, ಶಿರಗುಪ್ಪಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಭಕ್ತರು ಗಣೇಶ ಮೂರ್ತಿಗಳನ್ನು ಪೂಜೆಗೆ ತೆಗೆದುಕೊಂಡು ಹೋಗುತ್ತಾರೆ. ಪ್ರಸಕ್ತ ವರ್ಷದಲ್ಲಿ ಜಮಾದಾರ ಕುಟುಂಬ ಸುಮಾರು 250ರಿಂದ 300 ಗಣೇಶ ಮೂರ್ತಿಗಳನ್ನು ತಯಾರಿಸಿದ್ದು, ಗಣೇಶ ಚೌತಿ ಹಬ್ಬದ ಮುನ್ನಾ ದಿನ ಗಣೇಶ ಮೂರ್ತಿಗಳ ಅಂತಿಮ ಕೆಲಸ ಮುಕ್ತಾಯವಾಗಲಿದೆ. ಒಟ್ಟಾರೆಯಾಗಿ ಜಾತಿ ಧರ್ಮ ಎಂದು ಬಡಿದಾಡುವರ ನಡುವೆ ಜಮಾದಾರ ಕುಟುಂಬ ಸಮಾಜಕ್ಕೆ ಮಾದರಿಯಾಗಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

13 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago