Featured

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ -Vishwanews24

80 ವರ್ಷಗಳಿಂದ ಗಣಪತಿ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ: ಕೋಮು ಸೌಹಾರ್ದ ಸಂದೇಶ ಸಾರುವ ಅಲ್ಲಾಬಕ್ಷ ಜಮಾದಾರ ..

ಇವರು ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ..

ಚಿಕ್ಕೋಡಿ: ಗಣೇಶನ ಮೂರ್ತಿಗಳನ್ನು ತಯಾರಿಸುತ್ತಿರುವ ಮುಸ್ಲಿಂ ಕುಟುಂಬ ಗಡಿನಾಡಿನಲ್ಲಿ ಕೋಮು ಸೌಹಾರ್ದತೆ ಸಂದೇಶ ಸಾರುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಎಂಬ ಪುಟ್ಟ ಗ್ರಾಮವೊಂದರಲ್ಲಿ ಅಲ್ಲಾಬಕ್ಷ ಜಮಾದಾರ ಎಂಬ ಮುಸ್ಲಿಂ ಕುಟುಂಬ ಕಳೆದ 80 ವರ್ಷಗಳಿಂದ ಗಣೇಶ ಮೂರ್ತಿ ತಯಾರಿಸಿ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಕೋಮು ಸೌಹಾರ್ದ ಸಂದೇಶ ಸಾರುತ್ತಿದ್ದಾರೆ. ಗ್ರಾಮದ ಅಲ್ಲಾಬಕ್ಷ ಜಮಾದಾರ ಕುಟುಂಬ ಪ್ರತಿ ವರ್ಷ ನೂರಾರು ಗಣಪತಿ ಮೂರ್ತಿ ತಯಾರಿಸಿ ಭಕ್ತಾಧಿಗಳಿಗೆ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ.

ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರಾಗಿರುವ ಅಲ್ಲಾಬಕ್ಷ ಜಮಾದಾರ ಅವರು ತಮ್ಮ ಬಿಡುವಿನ ಸಮಯದಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಜಾತಿ-ಭೇದಭಾವ ಬದಿಗಿಟ್ಟು ತಲೆಗೆ ಟೋಪಿ ಧರಿಸಿ ಝಗಮಗಿಸುವ ಬಣ್ಣ ಬಣ್ಣಗಳಿಂದ ವಿಘ್ನೇಶ್ವರ ಮೂರ್ತಿ ತಯಾರಿಸುತ್ತಿದ್ದಾರೆ.

ಜಮಾದಾರ ಕುಟುಂಬ ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರ, ಯಡೂರವಾಡಿ, ಶಿರಗುಪ್ಪಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಭಕ್ತರು ಗಣೇಶ ಮೂರ್ತಿಗಳನ್ನು ಪೂಜೆಗೆ ತೆಗೆದುಕೊಂಡು ಹೋಗುತ್ತಾರೆ. ಪ್ರಸಕ್ತ ವರ್ಷದಲ್ಲಿ ಜಮಾದಾರ ಕುಟುಂಬ ಸುಮಾರು 250ರಿಂದ 300 ಗಣೇಶ ಮೂರ್ತಿಗಳನ್ನು ತಯಾರಿಸಿದ್ದು, ಗಣೇಶ ಚೌತಿ ಹಬ್ಬದ ಮುನ್ನಾ ದಿನ ಗಣೇಶ ಮೂರ್ತಿಗಳ ಅಂತಿಮ ಕೆಲಸ ಮುಕ್ತಾಯವಾಗಲಿದೆ. ಒಟ್ಟಾರೆಯಾಗಿ ಜಾತಿ ಧರ್ಮ ಎಂದು ಬಡಿದಾಡುವರ ನಡುವೆ ಜಮಾದಾರ ಕುಟುಂಬ ಸಮಾಜಕ್ಕೆ ಮಾದರಿಯಾಗಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

35 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

51 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

58 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago