Featured

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ – Vishwanews24

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ನವದೆಹಲಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಮತದಾರರು 2018-19 ರಿಂದ 9.17 ಲಕ್ಷದಷ್ಟು ಹೆಚ್ಚಿದ್ದಾರೆ. ಏಪ್ರಿಲ್ 1ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಬಹುದು ಎಂದು ಹೇಳಿದ್ದಾರೆ

ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 5,21,73,579 ನೋಂದಾಯಿತ ಮತದಾರರನ್ನು ಹೊಂದಿದೆ.ಈ ಪೈಕಿ 12.15 ಲಕ್ಷ ಯುವ ಮತದಾರರಿದ್ದಾರೆ. ರಾಜ್ಯಾದ್ಯಂತ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

 

ಮನೆಯಿಂದ ಮತದಾನ ಹೇಗೆ?

  • ಚುನಾವಣೆ ಆಯೋಗದ ವೆಪ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ.
  • ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
  • ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ
  • ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
  • ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago