Featured

800 ಅಡಿ ಪ್ರಪಾತಕ್ಕೆ ಬಿದ್ದ ಭಾರತೀಯ ದಂಪತಿಗಳ ದಾರುಣ ಅಂತ್ಯ

ನ್ಯೂಯಾರ್ಕ್‌: ಭಾರತೀಯ ಮೂಲದ ಸಾಫ್ಟ್ವೇರ್‌ ಉದ್ಯೋಗಿ ದಂಪತಿಗಳಿಬ್ಬರು ಪ್ರವಾಸಿ ಸ್ಥಳದಲ್ಲಿ  ಪ್ರಪಾತಕ್ಕೆ ಬಿದ್ದು  ದಾರುಣವಾಗಿ ಸಾವನ್ನಪ್ಪಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.

ಕ್ಯಾಲಿಫೋರ್ನಿಯಾದ ಯೋಸೆಮೈಟ್‌ ನ್ಯಾಷನಲ್‌ ಪಾರ್ಕ್‌ನಲ್ಲಿ  ಆಕ್ಟೋಬರ್‌ 25 ರಂದು ವಿಷ್ಣು ವಿಶ್ವನಾಥ್‌ (29) ಮತ್ತು ಪತ್ನಿ ಮೀನಾಕ್ಷಿ ಮೂರ್ತಿ (30) ಅವರು 800 ಅಡಿ ಆಳಕ್ಕೆ ಬಿದ್ದು  ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರ ಶವಗಳನ್ನು ಸೋಮವಾರ ಮೇಲಕ್ಕೆತ್ತಿ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.

ವಿಷ್ಣು ಅವರಿಗೆ ಇತ್ತೀಚೆಗೆ ಸಿಸ್ಕೋ ಕಂಪೆನಿಯಲ್ಲಿ ಸಿಸ್ಟಂ ಇಂಜಿನಿಯರ್‌ ಆಗಿ ಕೆಲಸ ಸಿಕ್ಕಿದ ಹಿನ್ನಲೆಯಲ್ಲಿ ದಂಪತಿಗಳು ಅಮೆರಿಕಕ್ಕೆ ತೆರಳಿ ಅಲ್ಲಿ ನೆಲೆಸಿದ್ದರು.

ಇಬ್ಬರು ಚಾರಣ ಪ್ರಿಯರಾಗಿದ್ದು ಸಾಹಸ ಪ್ರವೃತ್ತಿಯವರಾಗಿದ್ದರು. ಹಾಲಿಡೇಸ್‌ ಎಂಡ್‌ ಹ್ಯಾಪಿಲಿ ಎವರ್‌ ಆಫ್ಟರ್‌ ಎನ್ನುವ ಬ್ಲಾಗ್‌ನಲ್ಲಿ ತಮ್ಮ ಪ್ರವಾಸದ ಅನುಭವಗಳನ್ನು ಪೋಸ್ಟ್‌ ಮಾಡುತ್ತಿದ್ದರು.

ದಂಪತಿ 2014 ರಲ್ಲಿ ವಿವಾಹವಾಗಿದ್ದರು. ಚೆಂಗನೂರಿನಲ್ಲಿ ಇಬ್ಬರು ಇಂಜಿನಿಯರಿಂಗ್‌ ವ್ಯಾಸಂಗ ಮಾಡಿದ್ದರು.

ಸೆಲ್ಫಿ ತಂದ ಸಾವು
ದಂಪತಿ ಸಾಯುವುದಕ್ಕೂ ಮುಂಚೆ ಸೆಲ್ಫಿ ತೆಗೆದುಕೊಂಡಿದ್ದಾರೆ. ವಿಶ್ವದ ಜನಪ್ರಿಯ ನ್ಯಾಷನಲ್​ ಪಾರ್ಕ್​ನ ತುದಿಯಲ್ಲಿ ಒಂದು ವೇಳೆ ಪ್ರವಾಸಿಗರು ಆಯತಪ್ಪಿ ಬಿದ್ದರೂ ರಕ್ಷಣೆಗಾಗಿ ಯಾವ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಮೃತ ವಿಶ್ವನಾಥ್​ ಸೋದರ ಜಿಷ್ಣು ವಿಶ್ವನಾಥ್ ಅಂತಾರಾಷ್ಟ್ರೀಯ ಸುದ್ದಿವಾಹಿನಿ​ ​​ಗೆ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಿಂದ ಪಾರ್ಕ್​ನ ಅಧಿಕಾರಿಗಳು ಟ್ರೈಪಾಡ್​ ವಶ ಪಡಿಸಿಕೊಂಡಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೃತ ಮೀನಾಕ್ಷಿ ಟ್ರೈಪಾಡ್ ಸೆಟ್​ ಮಾಡಿದ್ದರು ಎಂಬುದು ತಿಳಿದುಬಂದಿದೆ. ಇದರ ಆಧಾರದ ಮೇಲೆ ದಂಪತಿ ಪ್ರಪಾತಕ್ಕೆ ಬಿದ್ದಿರುವುದು ಖಚಿತಗೊಂಡು ಕಳೆದ ವಾರ ಬೈನಾಕ್ಯುಲರ್ ಮತ್ತು ಹೆಲಿಕಾಪ್ಟರ್​ಗಳನ್ನು ಬಳಸಿ ಮೃತದೇಹಗಳನ್ನು ಮೇಲೆತ್ತಿದ್ದರು.

 

 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

24 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago