Featured

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ – vishwanews24

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್‌ಕಮ್‌ ಹೆಲ್ತ್‌ ಸಂಸ್ಥೆಯ ಸಹ ಸಂಸ್ಥಾಪಕ ರಿಷಿ ಶಾ ಅವರು ಬರೋಬ್ಬರಿ 8,300 ಕೋಟಿ ರೂ. ವಂಚನೆ ಮಾಡಿದ್ದಾರೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಿ ಶಾ ಅವರನ್ನು ಅಮೆರಿಕ ಜಿಲ್ಲಾ ಕೋರ್ಟ್‌ ದೋಷಿ ಎಂದು ಘೋಷಿಸಿದ್ದು, ಏಳೂವರೆ ವರ್ಷ ಶಿಕ್ಷೆ ವಿಧಿಸಿದೆ.

ಗೋಲ್ಡ್‌ ಸಚ್ಸ್‌ ಗ್ರೂಪ್‌, ಗೂಗಲ್‌ ಪೇರೆಂಟ್‌ ಆಲ್ಫಬೆಟ್‌ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರೈಜಕರ್ ನಂತಹ ಹೂಡಿಕೆದಾರರಿಗೆ ತಮ್ಮ ಸ್ಕೀಂ ಮೂಲಕ ರಿಷಿ ಶಾ 8,300 ಕೋಟಿ ರೂ. ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ದೋಷಿ ಎಂದು ಘೋಷಿಸಿ, ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಮೆರಿಕ ಜಿಲ್ಲಾ ನ್ಯಾಯಾಧೀಶ ಥಾಮನ್‌ ಡರ್ಕಿನ್‌ ಅವರು ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ಇದು ಅಮೆರಿಕದ ಇತಿಹಾಸದಲ್ಲಿನ ಅತಿದೊಡ್ಡ ಕಾರ್ಪೋರೇಟ್‌ ಹಗರಣವಾಗಿದೆ ಎಂದು ಹೇಳಿದ್ದಾರೆ. ಇನ್ನು ರಿಷಿ ಶಾ, ಶ್ರದ್ಧಾ ಅಗರ್ವಾಲ್‌ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಬ್ರಾಡ್‌ ಪುರ್ಡೈ ಜತೆಗೂಡಿ ಹೂಡಿಕೆದಾರರಿಗೆ, ಕ್ಲಯಂಟ್‌ ಗಳಿಗೆ ದೊಡ್ಡ ಪ್ರಮಾಣದಲ್ಲಿ ವಂಚನೆ ಎಸಗಿದ್ದಾರೆ ಎನ್ನಲಾಗಿದೆ.

ಇನ್ನು ಹೂಡಿಕೆದಾರರಿಗೆ ಸುಳ್ಳು ಹೇಳಿ ವಂಚನೆ, ಸುಳ್ಳು ಜಾಹೀರಾತು ಪ್ರಕಟಿಸಿ ವಂಚನೆ ಹೀಗೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ರಿಷಿ ಶಾಗೆ 15ವರ್ಷಗಳ ಶಿಕ್ಷೆ ವಿಧಿಸಬೇಕೆಂದು ಕೋರ್ಟ್‌ಗೆ ಸಂತ್ರಸ್ತರು ಮನವಿ ಕೂಡ ಮಾಡಿದ್ದರು. ಆದರೆ ಕೋರ್ಟ್ ಏಳೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago