Featured

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ – vishwanews24

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್‌ಕಮ್‌ ಹೆಲ್ತ್‌ ಸಂಸ್ಥೆಯ ಸಹ ಸಂಸ್ಥಾಪಕ ರಿಷಿ ಶಾ ಅವರು ಬರೋಬ್ಬರಿ 8,300 ಕೋಟಿ ರೂ. ವಂಚನೆ ಮಾಡಿದ್ದಾರೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಿ ಶಾ ಅವರನ್ನು ಅಮೆರಿಕ ಜಿಲ್ಲಾ ಕೋರ್ಟ್‌ ದೋಷಿ ಎಂದು ಘೋಷಿಸಿದ್ದು, ಏಳೂವರೆ ವರ್ಷ ಶಿಕ್ಷೆ ವಿಧಿಸಿದೆ.

ಗೋಲ್ಡ್‌ ಸಚ್ಸ್‌ ಗ್ರೂಪ್‌, ಗೂಗಲ್‌ ಪೇರೆಂಟ್‌ ಆಲ್ಫಬೆಟ್‌ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರೈಜಕರ್ ನಂತಹ ಹೂಡಿಕೆದಾರರಿಗೆ ತಮ್ಮ ಸ್ಕೀಂ ಮೂಲಕ ರಿಷಿ ಶಾ 8,300 ಕೋಟಿ ರೂ. ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ದೋಷಿ ಎಂದು ಘೋಷಿಸಿ, ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಮೆರಿಕ ಜಿಲ್ಲಾ ನ್ಯಾಯಾಧೀಶ ಥಾಮನ್‌ ಡರ್ಕಿನ್‌ ಅವರು ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ಇದು ಅಮೆರಿಕದ ಇತಿಹಾಸದಲ್ಲಿನ ಅತಿದೊಡ್ಡ ಕಾರ್ಪೋರೇಟ್‌ ಹಗರಣವಾಗಿದೆ ಎಂದು ಹೇಳಿದ್ದಾರೆ. ಇನ್ನು ರಿಷಿ ಶಾ, ಶ್ರದ್ಧಾ ಅಗರ್ವಾಲ್‌ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಬ್ರಾಡ್‌ ಪುರ್ಡೈ ಜತೆಗೂಡಿ ಹೂಡಿಕೆದಾರರಿಗೆ, ಕ್ಲಯಂಟ್‌ ಗಳಿಗೆ ದೊಡ್ಡ ಪ್ರಮಾಣದಲ್ಲಿ ವಂಚನೆ ಎಸಗಿದ್ದಾರೆ ಎನ್ನಲಾಗಿದೆ.

ಇನ್ನು ಹೂಡಿಕೆದಾರರಿಗೆ ಸುಳ್ಳು ಹೇಳಿ ವಂಚನೆ, ಸುಳ್ಳು ಜಾಹೀರಾತು ಪ್ರಕಟಿಸಿ ವಂಚನೆ ಹೀಗೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ರಿಷಿ ಶಾಗೆ 15ವರ್ಷಗಳ ಶಿಕ್ಷೆ ವಿಧಿಸಬೇಕೆಂದು ಕೋರ್ಟ್‌ಗೆ ಸಂತ್ರಸ್ತರು ಮನವಿ ಕೂಡ ಮಾಡಿದ್ದರು. ಆದರೆ ಕೋರ್ಟ್ ಏಳೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

12 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

14 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

15 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

15 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

15 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

15 hours ago