Featured

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಪೋನ್ ಕರೆ ಮೂಲಕ ಕುಟುಂಬದ ಯಜಮಾನನಿಗೆ ಧೈರ್ಯ ನೀಡಿದ ಗೃಹ ಸಚಿವ ಪರಮೇಶ್ವರ್ – vishwanews24

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ ಗೃಹ ಸಚಿವ

ಉಡುಪಿ : ಸಂತೆಕಟ್ಟೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಪೋನ್ ಕರೆ ಮೂಲಕ ಧೈರ್ಯ ನೀಡಿದ್ದಾರೆ.

ಆರೋಪಿಯನ್ನು ಶೀಘ್ರವೇ ಬಂದಿಸಿ ಜನರನ್ನು ಭಯದಿಂದ ಮುಕ್ತಿಗೊಳಿಸಿ. ಸ್ಥಳೀಯರು ಈ ಘಟನೆಯ ಬಳಿಕ ದೀಪಾವಳಿಯನ್ನು ಕೂಡಾ ಆಚರಣೆ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರಲ್ಲಿ ನೂರ್ ಮಹಮ್ಮದ್ ಅವರು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಗೃಹ ಸಚಿವ ಪರಮೇಶ್ವರ್ ಅವರು ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿ, ನೂರ್ ಮಹಮ್ಮದ್ ಅವರಿಗೆ ಧೈರ್ಯ ನೀಡಿದ್ದಾರೆ.

ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನೂರ್ ಮಹಮ್ಮದ್, ನಮ್ಮ ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಇಂತಹ ಸುದ್ದಿಗಳನ್ನು ಹರಡಬೇಡಿ. ನಮಗೆ ಮನೆಯಿಂದ ಹೊರಗೆ ಬರಲು ಕೂಡಾ ಹೆದರಿಕೆಯಾಗುತ್ತಿದೆ. ಹೀಗಾಗಿ ಆರೋಪಿಯನ್ನು ಶೀಘ್ರವೇ ಬಂಧಿಸಿ. ಪೋಲಿಸರು ನಮಗೆ ಒಳ್ಳೆ ಸಹಕಾರ‌ ನೀಡಿದ್ದಾರೆ, ಇನ್ನು ಮುಂದೆ ಕೂಡಾ ನಾವು ತನಿಖೆಗೆ ಸಹಕರಿಸುತ್ತೆವೆ. 15 ನಿಮಿಷದಲ್ಲಿ ಇಂತಹ ಕೃತ್ಯ ಆಗಿದೆ ಎಂದರೆ ಮನುಷ್ಯತ್ವ ಇಲ್ಲವೆ? ನನ್ನ ತಾಯಿ ಈಗ ಆರೋಗ್ಯವಾಗಿದ್ದಾರೆ ಅವರನ್ನು ಅವರ ಮನೆಗೆ‌ ಕಳುಹಿಸಿ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಎಂಎಲ್ ಸಿ ಮಂಜುನಾಥ ಭಂಡಾರಿ, ಮತ್ತು ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

52 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

5 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

6 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

7 hours ago