Featured

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಪೋನ್ ಕರೆ ಮೂಲಕ ಕುಟುಂಬದ ಯಜಮಾನನಿಗೆ ಧೈರ್ಯ ನೀಡಿದ ಗೃಹ ಸಚಿವ ಪರಮೇಶ್ವರ್ – vishwanews24

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ ಗೃಹ ಸಚಿವ

ಉಡುಪಿ : ಸಂತೆಕಟ್ಟೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಪೋನ್ ಕರೆ ಮೂಲಕ ಧೈರ್ಯ ನೀಡಿದ್ದಾರೆ.

ಆರೋಪಿಯನ್ನು ಶೀಘ್ರವೇ ಬಂದಿಸಿ ಜನರನ್ನು ಭಯದಿಂದ ಮುಕ್ತಿಗೊಳಿಸಿ. ಸ್ಥಳೀಯರು ಈ ಘಟನೆಯ ಬಳಿಕ ದೀಪಾವಳಿಯನ್ನು ಕೂಡಾ ಆಚರಣೆ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರಲ್ಲಿ ನೂರ್ ಮಹಮ್ಮದ್ ಅವರು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಗೃಹ ಸಚಿವ ಪರಮೇಶ್ವರ್ ಅವರು ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿ, ನೂರ್ ಮಹಮ್ಮದ್ ಅವರಿಗೆ ಧೈರ್ಯ ನೀಡಿದ್ದಾರೆ.

ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನೂರ್ ಮಹಮ್ಮದ್, ನಮ್ಮ ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಇಂತಹ ಸುದ್ದಿಗಳನ್ನು ಹರಡಬೇಡಿ. ನಮಗೆ ಮನೆಯಿಂದ ಹೊರಗೆ ಬರಲು ಕೂಡಾ ಹೆದರಿಕೆಯಾಗುತ್ತಿದೆ. ಹೀಗಾಗಿ ಆರೋಪಿಯನ್ನು ಶೀಘ್ರವೇ ಬಂಧಿಸಿ. ಪೋಲಿಸರು ನಮಗೆ ಒಳ್ಳೆ ಸಹಕಾರ‌ ನೀಡಿದ್ದಾರೆ, ಇನ್ನು ಮುಂದೆ ಕೂಡಾ ನಾವು ತನಿಖೆಗೆ ಸಹಕರಿಸುತ್ತೆವೆ. 15 ನಿಮಿಷದಲ್ಲಿ ಇಂತಹ ಕೃತ್ಯ ಆಗಿದೆ ಎಂದರೆ ಮನುಷ್ಯತ್ವ ಇಲ್ಲವೆ? ನನ್ನ ತಾಯಿ ಈಗ ಆರೋಗ್ಯವಾಗಿದ್ದಾರೆ ಅವರನ್ನು ಅವರ ಮನೆಗೆ‌ ಕಳುಹಿಸಿ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಎಂಎಲ್ ಸಿ ಮಂಜುನಾಥ ಭಂಡಾರಿ, ಮತ್ತು ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago