ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿ 4 ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ, ಅಡಗಿರುವ ಇಬ್ಬರು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದಿವರೆದಿದೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದು ವರೆಸಲಾಗಿದ್ದು, ಅಡಗಿಕೊಂಡಿರುವ ಇಬ್ಬರು ಉಗ್ರರಿರಾಗಿ ಬಲೆ ಬೀಸಲಾಗಿದೆ.
ದಕ್ಷಿಣ ಕನ್ನಡದ ಪ್ರಾಂಜಲ್: ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಪ್ರಾಂಜಲ್ ಅವರು ಮಂಗಳೂರು ಎಂಆರ್ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಅವರು ಮೇ 31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…