ಮಂಗಳೂರು : ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ. 27 ರಂದು ಸಂಜೆ 8 ಗಂಟೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಗ್ರೆಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜ ದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡಿತ್ತು.
ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…