ಮಂಗಳೂರು : ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ. 27 ರಂದು ಸಂಜೆ 8 ಗಂಟೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಗ್ರೆಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜ ದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡಿತ್ತು.
ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…