Featured

850 ರೈತರ ಸಾಲವನ್ನು ತಾವೇ ಪಾವತಿಸಲಿರುವ ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾಬ್‌ ಬಚ್ಚನ್‌

ಮುಂಬೈ: ಉತ್ತರ ಪ್ರದೇಶದ ಸುಮಾರು 850 ರೈತರ ಸಾಲವನ್ನು ತಾವೇ ಪಾವತಿಸುವುದಾಗಿ ಖ್ಯಾತ ಹಿಂದಿ ಚಲನ ಚಿತ್ರ ನಟ ಅಮಿತಾಬ್‌ ಬಚ್ಚನ್‌ ತಿಳಿಸಿದ್ದಾರೆ.

‘ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈ ರೈತರು ಸಾಲ ಮರುಪಾವತಿಸಲು ಸಾಧ್ಯವಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳದಂತೆ ಕೆಲವು ದಿನಗಳ ಹಿಂದೆ ಈ ರೈತರ ಸಾಲವನ್ನು ಪಾವತಿಸಲಾಯಿತು.

ಈ ಮೊದಲು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ವಿದರ್ಭ ಪ್ರದೇಶದ ರೈತರ ಸಾಲ ತೀರಿಸಿ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ 850 ರೈತರನ್ನು ಗುರುತಿಸಲಾಗಿದೆ. ಈ ರೈತರ ಸಾಲ ₹5.5 ಕೋಟಿಯಾಗುತ್ತದೆ. ಈ ಸಾಲವನ್ನು ನಾನೇ ತೀರಿಸುತ್ತೇನೆ’ ಎಂದು ಬ್ಲಾಗ್‌ನಲ್ಲಿ ಅಮಿತಾಬ್‌ ಬರೆದಿದ್ದಾರೆ.

‘ರೈತರಿಗೆ ನೆರವಾಗಿದ್ದು ತೃಪ್ತಿ ತಂದಿದೆ. ಇದೇ ರೀತಿ ನಮಗಾಗಿ ಎಲ್ಲ ರೀತಿಯಲ್ಲೂ ತ್ಯಾಗ ಮಾಡುವವರಿಗಾಗಿ ನೆರವು ನೀಡುವುದು ಅಗತ್ಯವಿದೆ. ದೇಶದ ಇತರ ಭಾಗಗಳಲ್ಲಿ ಸಂಕಷ್ಟದಲ್ಲಿರುವವವರಿಗೆ ನೆರವು ನೀಡಬೇಕು. ಮುಂದಿನ ದಿನಗಳಲ್ಲಿ ಈ ಕಾರ್ಯ ನಡೆಯಲಿದೆ’ ಎಂದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago