Featured

850 ರೈತರ ಸಾಲವನ್ನು ತಾವೇ ಪಾವತಿಸಲಿರುವ ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾಬ್‌ ಬಚ್ಚನ್‌

ಮುಂಬೈ: ಉತ್ತರ ಪ್ರದೇಶದ ಸುಮಾರು 850 ರೈತರ ಸಾಲವನ್ನು ತಾವೇ ಪಾವತಿಸುವುದಾಗಿ ಖ್ಯಾತ ಹಿಂದಿ ಚಲನ ಚಿತ್ರ ನಟ ಅಮಿತಾಬ್‌ ಬಚ್ಚನ್‌ ತಿಳಿಸಿದ್ದಾರೆ.

‘ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈ ರೈತರು ಸಾಲ ಮರುಪಾವತಿಸಲು ಸಾಧ್ಯವಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳದಂತೆ ಕೆಲವು ದಿನಗಳ ಹಿಂದೆ ಈ ರೈತರ ಸಾಲವನ್ನು ಪಾವತಿಸಲಾಯಿತು.

ಈ ಮೊದಲು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ವಿದರ್ಭ ಪ್ರದೇಶದ ರೈತರ ಸಾಲ ತೀರಿಸಿ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ 850 ರೈತರನ್ನು ಗುರುತಿಸಲಾಗಿದೆ. ಈ ರೈತರ ಸಾಲ ₹5.5 ಕೋಟಿಯಾಗುತ್ತದೆ. ಈ ಸಾಲವನ್ನು ನಾನೇ ತೀರಿಸುತ್ತೇನೆ’ ಎಂದು ಬ್ಲಾಗ್‌ನಲ್ಲಿ ಅಮಿತಾಬ್‌ ಬರೆದಿದ್ದಾರೆ.

‘ರೈತರಿಗೆ ನೆರವಾಗಿದ್ದು ತೃಪ್ತಿ ತಂದಿದೆ. ಇದೇ ರೀತಿ ನಮಗಾಗಿ ಎಲ್ಲ ರೀತಿಯಲ್ಲೂ ತ್ಯಾಗ ಮಾಡುವವರಿಗಾಗಿ ನೆರವು ನೀಡುವುದು ಅಗತ್ಯವಿದೆ. ದೇಶದ ಇತರ ಭಾಗಗಳಲ್ಲಿ ಸಂಕಷ್ಟದಲ್ಲಿರುವವವರಿಗೆ ನೆರವು ನೀಡಬೇಕು. ಮುಂದಿನ ದಿನಗಳಲ್ಲಿ ಈ ಕಾರ್ಯ ನಡೆಯಲಿದೆ’ ಎಂದಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

4 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

4 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago