ಮುಂಬೈ: ಉತ್ತರ ಪ್ರದೇಶದ ಸುಮಾರು 850 ರೈತರ ಸಾಲವನ್ನು ತಾವೇ ಪಾವತಿಸುವುದಾಗಿ ಖ್ಯಾತ ಹಿಂದಿ ಚಲನ ಚಿತ್ರ ನಟ ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ.
‘ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈ ರೈತರು ಸಾಲ ಮರುಪಾವತಿಸಲು ಸಾಧ್ಯವಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳದಂತೆ ಕೆಲವು ದಿನಗಳ ಹಿಂದೆ ಈ ರೈತರ ಸಾಲವನ್ನು ಪಾವತಿಸಲಾಯಿತು.
ಈ ಮೊದಲು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ವಿದರ್ಭ ಪ್ರದೇಶದ ರೈತರ ಸಾಲ ತೀರಿಸಿ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ 850 ರೈತರನ್ನು ಗುರುತಿಸಲಾಗಿದೆ. ಈ ರೈತರ ಸಾಲ ₹5.5 ಕೋಟಿಯಾಗುತ್ತದೆ. ಈ ಸಾಲವನ್ನು ನಾನೇ ತೀರಿಸುತ್ತೇನೆ’ ಎಂದು ಬ್ಲಾಗ್ನಲ್ಲಿ ಅಮಿತಾಬ್ ಬರೆದಿದ್ದಾರೆ.
‘ರೈತರಿಗೆ ನೆರವಾಗಿದ್ದು ತೃಪ್ತಿ ತಂದಿದೆ. ಇದೇ ರೀತಿ ನಮಗಾಗಿ ಎಲ್ಲ ರೀತಿಯಲ್ಲೂ ತ್ಯಾಗ ಮಾಡುವವರಿಗಾಗಿ ನೆರವು ನೀಡುವುದು ಅಗತ್ಯವಿದೆ. ದೇಶದ ಇತರ ಭಾಗಗಳಲ್ಲಿ ಸಂಕಷ್ಟದಲ್ಲಿರುವವವರಿಗೆ ನೆರವು ನೀಡಬೇಕು. ಮುಂದಿನ ದಿನಗಳಲ್ಲಿ ಈ ಕಾರ್ಯ ನಡೆಯಲಿದೆ’ ಎಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…