ಕುಂದಾಪುರ : ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು.
ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ. ಕಸ್ತೂರಿ ಶ್ಯಾನುಭಾಗ್ ಅವರ ಪುತ್ರ ಅಶೋಕ್ ಶ್ಯಾನುಭೋಗ್ ಅವರು 1979ರಲ್ಲಿ ರೂಪಕಲಾ ಸಂಸ್ಥೆಯಲ್ಲಿ ಬಾಲ ಕಲಾವಿದರಾಗಿ ಸತ್ಯ ಹರಿಶ್ಚಂದ್ರ, ಟಿಪ್ಪು ಸುಲ್ತಾನ್ ನಾಟಕದ ಮೂಲಕ ರಂಗಭೂಮಿ ಪ್ರವೇಶಿಸಿದವರು. ಓದಿನ ಬಳಿಕ ನಿರಂತರವಾಗಿ ರಂಗಭೂಮಿ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.
ಸ್ವ ಉದ್ಯೋಗ ಮಾಡಿಕೊಂಡಿದ್ದ ಅಶೋಕ್ ಅವರು ನಾಟಕವನ್ನೇ ಬದುಕಿನ ಭಾಗವಾಗಿಸಿಕೊಂಡಿದ್ದರು. ರೂಪಕಲಾ ಸಂಸ್ಥೆಯ ದಿ. ಬಾಲಕೃಷ್ಣ ಪೈ (ಕುಳ್ಳಪ್ಪು) ಅವರ ನೆಚ್ಚಿನ ಶಿಷ್ಯರಾಗಿದ್ದ ಅವರು ಕುಳ್ಳಪ್ಪು ಅವರ 53 ನಾಟಕಗಳಲ್ಲಿ ಹಾಗೂ ಸತೀಶ್ ಪೈ ಅವರ 11 ನಾಟಕ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರೂಪಕಲಾ ಸಂಸ್ಥೆಯ ನಾಟಕಗಳು ಕನ್ನಡ ಮತ್ತು ಕೊಂಕಣಿಯಲ್ಲಿ ಏಳು ಸಾವಿರಕ್ಕೂ ಮಿಕ್ಕಿ ಪ್ರದರ್ಶನ ಕಂಡಿದ್ದವು. ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಇವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…