Featured

ಕುಂದಾಪುರ : ಮೂರು ಮುತ್ತು ಖ್ಯಾತಿಯ ರಂಗಕಲಾವಿದ ಅಶೋಕ್ ಶ್ಯಾನುಭಾಗ್ ಇನ್ನಿಲ್ಲ – vishwanews24

ಕುಂದಾಪುರ : ಮೂರು ಮುತ್ತು ಖ್ಯಾತಿಯ ರಂಗಕಲಾವಿದ ಅಶೋಕ್ ಶ್ಯಾನುಭಾಗ್ ಇನ್ನಿಲ್ಲ

ಕುಂದಾಪುರ : ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು.

ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ. ಕಸ್ತೂರಿ ಶ್ಯಾನುಭಾಗ್ ಅವರ ಪುತ್ರ ಅಶೋಕ್ ಶ್ಯಾನುಭೋಗ್ ಅವರು 1979ರಲ್ಲಿ ರೂಪಕಲಾ ಸಂಸ್ಥೆಯಲ್ಲಿ ಬಾಲ ಕಲಾವಿದರಾಗಿ ಸತ್ಯ ಹರಿಶ್ಚಂದ್ರ, ಟಿಪ್ಪು ಸುಲ್ತಾನ್ ನಾಟಕದ ಮೂಲಕ ರಂಗಭೂಮಿ ಪ್ರವೇಶಿಸಿದವರು. ಓದಿನ ಬಳಿಕ ನಿರಂತರವಾಗಿ ರಂಗಭೂಮಿ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

ಸ್ವ ಉದ್ಯೋಗ ಮಾಡಿಕೊಂಡಿದ್ದ ಅಶೋಕ್ ಅವರು ನಾಟಕವನ್ನೇ ಬದುಕಿನ ಭಾಗವಾಗಿಸಿಕೊಂಡಿದ್ದರು. ರೂಪಕಲಾ ಸಂಸ್ಥೆಯ ದಿ. ಬಾಲಕೃಷ್ಣ ಪೈ (ಕುಳ್ಳಪ್ಪು) ಅವರ ನೆಚ್ಚಿನ ಶಿಷ್ಯರಾಗಿದ್ದ ಅವರು ಕುಳ್ಳಪ್ಪು ಅವರ 53 ನಾಟಕಗಳಲ್ಲಿ ಹಾಗೂ ಸತೀಶ್ ಪೈ ಅವರ 11 ನಾಟಕ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರೂಪಕಲಾ ಸಂಸ್ಥೆಯ ನಾಟಕಗಳು ಕನ್ನಡ ಮತ್ತು ಕೊಂಕಣಿಯಲ್ಲಿ ಏಳು ಸಾವಿರಕ್ಕೂ ಮಿಕ್ಕಿ ಪ್ರದರ್ಶನ ಕಂಡಿದ್ದವು. ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಇವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago