ಉಡುಪಿ: ಎರಡು ಕಾಲು ನೋವಿರುವ ವಯೋವೃದ್ಧರು ನಮ್ಮ ರಾಜ್ಯದಿಂದ ಅಯೋಧ್ಯೆಗೆ ಹೊರಟಿದ್ದಾರೆ.
ಕರ್ನಾಟಕದ ವಿಶೇಷ ಭಕ್ತರೊಬ್ಬರು ಅಯೋಧ್ಯೆಗೆ ಗಾಲಿಕುರ್ಚಿಯಲ್ಲಿ ಹೊರಟಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳನ್ನು ಸಂದರ್ಶನ ಮಾಡುತ್ತಾ, ರಾಮಲಲ್ಲಾನನ್ನು ನೋಡಲು ಮಂಜುನಾಥ ತೆರಳುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದಾರಿಯಲ್ಲಿರುವ ಎಲ್ಲಾ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ.
ಒಂದೆರಡು ತಿಂಗಳಲ್ಲಿ ಅಯೋಧ್ಯೆ ತಲುಪುವ ಲೆಕ್ಕಾಚಾರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಮೂಲದ ಮಂಜುನಾಥ್, ಹರಿದ್ವಾರ, ಮಥುರಾ, ಆಗ್ರಾ ಮಹಾರಾಷ್ಟ್ರ ಖಂಡ್ವಾ ಪಂಡರಪುರ ಮಹಾಲಕ್ಷ್ಮಿ ಕೊಲ್ಹಾಪುರ ಕೂಡಲಸಂಗಮ, ತಮಿಳುನಾಡು, ತಿರುಪತಿ, ತಿರುಮಲ, ತಿರುಚಿ ಕನ್ಯಾಕುಮಾರಿ, ರಾಮೇಶ್ವರ ಕ್ಷೇತ್ರಗಳನ್ನು ಸುತ್ತಾಡಿದ್ದಾರೆ.
ಯುವಕನಾಗಿದ್ದಾಗ ಬೈಕ್, ಆಮೇಲೆ ಸೈಕಲ್ ಈಗ ಗಾಲಿಕುರ್ಚಿಯ ಮೂಲಕ ಮಂಜುನಾಥ್ ಯಾತ್ರೆ ಹೊರಟಿದ್ದಾರೆ. ಮo- ಮಂದಿರದಲ್ಲಿ ತಂಗಿ ಮುಂದಿನ ಕ್ಷೇತ್ರಕ್ಕೆ ತೆರಳುತ್ತಾರೆ. ಊಟ-ಉಪಹಾರ ಎಲ್ಲವೂ ಉಚಿತವಾಗಿಯೇ ಆಗುತ್ತದೆ. ಸಂತ ರವಿದಾಸರು ನನ್ನೊಳಗೆ ಅಂತರ್ಗತರು ಎನ್ನುತ್ತಾ, ರಾಮ – ಹನುಮನ ಧ್ವಜದ ರಕ್ಷೆಯೊಂದಿಗೆ ತೆರಳುತ್ತಿದ್ದೇನೆ ಎಂದು ಭಕ್ತಿಯ ಮಾತುಗಳನ್ನಾಡುತ್ತಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…