ಉಡುಪಿ: ಎರಡು ಕಾಲು ನೋವಿರುವ ವಯೋವೃದ್ಧರು ನಮ್ಮ ರಾಜ್ಯದಿಂದ ಅಯೋಧ್ಯೆಗೆ ಹೊರಟಿದ್ದಾರೆ.
ಕರ್ನಾಟಕದ ವಿಶೇಷ ಭಕ್ತರೊಬ್ಬರು ಅಯೋಧ್ಯೆಗೆ ಗಾಲಿಕುರ್ಚಿಯಲ್ಲಿ ಹೊರಟಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳನ್ನು ಸಂದರ್ಶನ ಮಾಡುತ್ತಾ, ರಾಮಲಲ್ಲಾನನ್ನು ನೋಡಲು ಮಂಜುನಾಥ ತೆರಳುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದಾರಿಯಲ್ಲಿರುವ ಎಲ್ಲಾ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ.
ಒಂದೆರಡು ತಿಂಗಳಲ್ಲಿ ಅಯೋಧ್ಯೆ ತಲುಪುವ ಲೆಕ್ಕಾಚಾರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಮೂಲದ ಮಂಜುನಾಥ್, ಹರಿದ್ವಾರ, ಮಥುರಾ, ಆಗ್ರಾ ಮಹಾರಾಷ್ಟ್ರ ಖಂಡ್ವಾ ಪಂಡರಪುರ ಮಹಾಲಕ್ಷ್ಮಿ ಕೊಲ್ಹಾಪುರ ಕೂಡಲಸಂಗಮ, ತಮಿಳುನಾಡು, ತಿರುಪತಿ, ತಿರುಮಲ, ತಿರುಚಿ ಕನ್ಯಾಕುಮಾರಿ, ರಾಮೇಶ್ವರ ಕ್ಷೇತ್ರಗಳನ್ನು ಸುತ್ತಾಡಿದ್ದಾರೆ.
ಯುವಕನಾಗಿದ್ದಾಗ ಬೈಕ್, ಆಮೇಲೆ ಸೈಕಲ್ ಈಗ ಗಾಲಿಕುರ್ಚಿಯ ಮೂಲಕ ಮಂಜುನಾಥ್ ಯಾತ್ರೆ ಹೊರಟಿದ್ದಾರೆ. ಮo- ಮಂದಿರದಲ್ಲಿ ತಂಗಿ ಮುಂದಿನ ಕ್ಷೇತ್ರಕ್ಕೆ ತೆರಳುತ್ತಾರೆ. ಊಟ-ಉಪಹಾರ ಎಲ್ಲವೂ ಉಚಿತವಾಗಿಯೇ ಆಗುತ್ತದೆ. ಸಂತ ರವಿದಾಸರು ನನ್ನೊಳಗೆ ಅಂತರ್ಗತರು ಎನ್ನುತ್ತಾ, ರಾಮ – ಹನುಮನ ಧ್ವಜದ ರಕ್ಷೆಯೊಂದಿಗೆ ತೆರಳುತ್ತಿದ್ದೇನೆ ಎಂದು ಭಕ್ತಿಯ ಮಾತುಗಳನ್ನಾಡುತ್ತಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…