ನವದೆಹಲಿ: ಭೂಮಿಯಿಂದ ಸೂರ್ಯನತ್ತ ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1 ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ ವಿಜ್ಞಾನಿಗಳು ಸಜ್ಜಾಗಿದ್ದಾರೆ.
ಕಳೆದ ವರ್ಷ ಸೆ.2ರಂದು ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಇದೀಗ 15 ಲಕ್ಷ ಕಿ.ಮೀ ಸಂಚರಿಸಿ ನಿಗದಿತ ಕಕ್ಷೆಯ ಬಳಿ ಸಮೀಪಿಸಿರುವ ಅದನ್ನು ಎಲ್1 ಪಾಯಿಂಟ್ ಎಂಬ ನಿರ್ವಾತ ಪ್ರದೇಶಕ್ಕೆ ಸೇರಿಸಲಾಗುತ್ತದೆ. ಉಪಗ್ರಹವನ್ನು ಸುಮಾರು ಸಂಜೆ 4 ಗಂಟೆಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ಗೆ ಸೇರಿಸುವ ನಿರೀಕ್ಷೆಯಿದೆ. ಅಕಸ್ಮಾತ್ ಅದನ್ನು ಆ ಪ್ರದೇಶಕ್ಕೆ ಸೇರಿಸದೇ ಇದ್ದರೆ ಅದು ಸೂರ್ಯನೆಡೆಗೆ ಸಂಚರಿಸಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಇಂದು (ಶನಿವಾರ) ಇಸ್ರೋಗೆ ಮಹತ್ವದ ದಿನವಾಗಿದೆ.
ಎಲ್1 ಪಾಯಿಂಟ್ ಎಂಬುದು ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.
ಚಂದ್ರಯಾನ 3 ಯಶಸ್ವಿಯಾದ ಬಳಿಕ ಇದು ಇಸ್ರೋದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಇದರ ಬೆನ್ನಲ್ಲೇ ಹೊಸವರ್ಷದ ಮೊದಲ ದಿನವೇ ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್ಪೋಸ್ಯಾಟ್ ಉಪಗ್ರಹದ ಉಡಾವಣೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿತ್ತು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…