Featured

ಇಸ್ರೋ ಮಹತ್ವದ ಕಾರ್ಯಾಚರಣೆ : ಇಂದು ಅಂತಿಮ ಕಕ್ಷೆ ತಲುಪಲಿದೆ ಆದಿತ್ಯ-ಎಲ್ 1 – vishwanews24

ಇಸ್ರೋ ಮಹತ್ವದ ಕಾರ್ಯಾಚರಣೆ : ಇಂದು ಅಂತಿಮ ಕಕ್ಷೆ ತಲುಪಲಿದೆ ಆದಿತ್ಯ-ಎಲ್ 1

ನವದೆಹಲಿ: ಭೂಮಿಯಿಂದ ಸೂರ್ಯನತ್ತ  ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1  ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ  ವಿಜ್ಞಾನಿಗಳು ಸಜ್ಜಾಗಿದ್ದಾರೆ.

ಕಳೆದ ವರ್ಷ ಸೆ.2ರಂದು ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಇದೀಗ 15 ಲಕ್ಷ ಕಿ.ಮೀ ಸಂಚರಿಸಿ ನಿಗದಿತ ಕಕ್ಷೆಯ ಬಳಿ ಸಮೀಪಿಸಿರುವ ಅದನ್ನು ಎಲ್1 ಪಾಯಿಂಟ್ ಎಂಬ ನಿರ್ವಾತ ಪ್ರದೇಶಕ್ಕೆ ಸೇರಿಸಲಾಗುತ್ತದೆ. ಉಪಗ್ರಹವನ್ನು ಸುಮಾರು ಸಂಜೆ 4 ಗಂಟೆಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ಗೆ ಸೇರಿಸುವ ನಿರೀಕ್ಷೆಯಿದೆ. ಅಕಸ್ಮಾತ್ ಅದನ್ನು ಆ ಪ್ರದೇಶಕ್ಕೆ ಸೇರಿಸದೇ ಇದ್ದರೆ ಅದು ಸೂರ್ಯನೆಡೆಗೆ ಸಂಚರಿಸಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಇಂದು (ಶನಿವಾರ) ಇಸ್ರೋಗೆ  ಮಹತ್ವದ ದಿನವಾಗಿದೆ.

ಎಲ್1 ಪಾಯಿಂಟ್ ಎಂಬುದು ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್‍ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.

ಚಂದ್ರಯಾನ 3 ಯಶಸ್ವಿಯಾದ ಬಳಿಕ ಇದು ಇಸ್ರೋದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಇದರ ಬೆನ್ನಲ್ಲೇ ಹೊಸವರ್ಷದ ಮೊದಲ ದಿನವೇ ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್ ಉಪಗ್ರಹದ ಉಡಾವಣೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿತ್ತು.

Vishwa News 24

Recent Posts

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

16 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

35 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago