ನವದೆಹಲಿ: ಭೂಮಿಯಿಂದ ಸೂರ್ಯನತ್ತ ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1 ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ ವಿಜ್ಞಾನಿಗಳು ಸಜ್ಜಾಗಿದ್ದಾರೆ.
ಕಳೆದ ವರ್ಷ ಸೆ.2ರಂದು ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಇದೀಗ 15 ಲಕ್ಷ ಕಿ.ಮೀ ಸಂಚರಿಸಿ ನಿಗದಿತ ಕಕ್ಷೆಯ ಬಳಿ ಸಮೀಪಿಸಿರುವ ಅದನ್ನು ಎಲ್1 ಪಾಯಿಂಟ್ ಎಂಬ ನಿರ್ವಾತ ಪ್ರದೇಶಕ್ಕೆ ಸೇರಿಸಲಾಗುತ್ತದೆ. ಉಪಗ್ರಹವನ್ನು ಸುಮಾರು ಸಂಜೆ 4 ಗಂಟೆಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ಗೆ ಸೇರಿಸುವ ನಿರೀಕ್ಷೆಯಿದೆ. ಅಕಸ್ಮಾತ್ ಅದನ್ನು ಆ ಪ್ರದೇಶಕ್ಕೆ ಸೇರಿಸದೇ ಇದ್ದರೆ ಅದು ಸೂರ್ಯನೆಡೆಗೆ ಸಂಚರಿಸಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಇಂದು (ಶನಿವಾರ) ಇಸ್ರೋಗೆ ಮಹತ್ವದ ದಿನವಾಗಿದೆ.
ಎಲ್1 ಪಾಯಿಂಟ್ ಎಂಬುದು ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.
ಚಂದ್ರಯಾನ 3 ಯಶಸ್ವಿಯಾದ ಬಳಿಕ ಇದು ಇಸ್ರೋದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಇದರ ಬೆನ್ನಲ್ಲೇ ಹೊಸವರ್ಷದ ಮೊದಲ ದಿನವೇ ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್ಪೋಸ್ಯಾಟ್ ಉಪಗ್ರಹದ ಉಡಾವಣೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿತ್ತು.
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…