ನವದೆಹಲಿ: ಭೂಮಿಯಿಂದ ಸೂರ್ಯನತ್ತ ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1 ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ ವಿಜ್ಞಾನಿಗಳು ಸಜ್ಜಾಗಿದ್ದಾರೆ.
ಕಳೆದ ವರ್ಷ ಸೆ.2ರಂದು ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಇದೀಗ 15 ಲಕ್ಷ ಕಿ.ಮೀ ಸಂಚರಿಸಿ ನಿಗದಿತ ಕಕ್ಷೆಯ ಬಳಿ ಸಮೀಪಿಸಿರುವ ಅದನ್ನು ಎಲ್1 ಪಾಯಿಂಟ್ ಎಂಬ ನಿರ್ವಾತ ಪ್ರದೇಶಕ್ಕೆ ಸೇರಿಸಲಾಗುತ್ತದೆ. ಉಪಗ್ರಹವನ್ನು ಸುಮಾರು ಸಂಜೆ 4 ಗಂಟೆಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ಗೆ ಸೇರಿಸುವ ನಿರೀಕ್ಷೆಯಿದೆ. ಅಕಸ್ಮಾತ್ ಅದನ್ನು ಆ ಪ್ರದೇಶಕ್ಕೆ ಸೇರಿಸದೇ ಇದ್ದರೆ ಅದು ಸೂರ್ಯನೆಡೆಗೆ ಸಂಚರಿಸಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಇಂದು (ಶನಿವಾರ) ಇಸ್ರೋಗೆ ಮಹತ್ವದ ದಿನವಾಗಿದೆ.
ಎಲ್1 ಪಾಯಿಂಟ್ ಎಂಬುದು ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.
ಚಂದ್ರಯಾನ 3 ಯಶಸ್ವಿಯಾದ ಬಳಿಕ ಇದು ಇಸ್ರೋದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಇದರ ಬೆನ್ನಲ್ಲೇ ಹೊಸವರ್ಷದ ಮೊದಲ ದಿನವೇ ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್ಪೋಸ್ಯಾಟ್ ಉಪಗ್ರಹದ ಉಡಾವಣೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…