Featured

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ಅವರಿಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ

ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಎಚ್​ಡಿಡಿ, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ.

ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ. ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು. ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಎಚ್.ಡಿ.ಡಿ, ಹಾಸನದಿಂದ ದೇವೇಗೌಡರು ನಿಲ್ಲಬೇಕು ಎಂದರು. ನಾನು ಕಳೆದಬಾರಿಯೇ ಹೇಳಿದ್ದೇನೆ, ನಾನು ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇನೆ. ನಾನು ವ್ಹೀಲ್ ಚೇರ್ ನಲ್ಲೇ ಬಂದೆ, ದೇವಾಲಯದಲ್ಲಿ ನಡೆದುಕೊಂಡೆ ಹೋದೆ. ದೇವೇಗೌಡರೆ ನೀವು 15 ಚುನಾವಣೆ ಕಳೆದಿದ್ದೀರಿ, ಜಾತ್ಯಾತೀತ ‌ತತ್ವದ ಅಡಿಯಲ್ಲಿ ರಾಜಕೀಯ‌ ಮಾಡಿದ್ದೀರಿ. ಈಗ ಏಕೆ ಮಾರ್ಪಾಡು ಮಾಡಿಕೊಂಡಿದ್ದೀರಿ ಎನ್ನುತ್ತಾರೆ. ಕುಮಾರಸ್ವಾಮಿ ಪ್ರತಿ ಪಂಚಾಯಿತಿಗೆ ಆಧುನಿಕ ಶಾಲೆ, ಆಸ್ಪತ್ರೆ ಕಟ್ಟುತ್ತೇನೆ ಎಂದರು.

ನಾನು ಈ ಜಿಲ್ಲೆಗೆ ಬಂದಿರೋದು ನನ್ನ ಮೊಮ್ಮಗನ್ನ ಗೆಲ್ಲಿಸೋದಕ್ಕಲ್ಲ, ಈ ಜಿಲ್ಲೆಯ ಅಭಿವೃದ್ಧಿಗಾಗಿ. ನಾವು ಏನು ಮೋಸ ಮಾಡಿದ್ದೇವೆ ಹೇಳಲಿ, ನಮ್ಮ ಸಮಾಜದವರನ್ನ ದೊಡ್ಡ ದೊಡ್ಡ ಸ್ಥಾನಕ್ಕೆ ಕಳಿಸಿದ್ದೇನೆ. ಅವರೆಲ್ಲಾ ಸೇರಿ ನಮ್ಮನ್ನ ಸೋಲಿಸಿದರು, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ. ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ ಎಂದರು.

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ. ನಿಮಗೆ ಮೀಸಲಾತಿ ನೀಡಿದ್ದೇನೆ, ಖರ್ಗೆಯವರು ಒಮ್ಮೆ ಮಾತ್ರ ಮೀಸಲಾತಿ ಕೊಡೋಣಾ ಎಂದಿದ್ದರು. ನಾನು ಕೊಟ್ಟ ಮೀಸಲಾತಿಯನ್ನ ಇಲ್ಲಿಯವರೆಗೂ ತೆಗೆದು ಹಾಕಲಿಕ್ಕೆ ಆಗಿಲ್ಲ, ಬೆಟ್ಟದ ರಂಗನಾಥ ಸ್ವಾಮಿಗೆ ಹರಕೆ ಮಾಡಿಕೊಂಡ ನಂತರ‌ ನಾನು ಹುಟ್ಟಿದ್ದೇನೆ. ಎಲ್ಲಾ ಸಮುದಾಯದ ದೇವಾಲಯಗಳಿಗೂ ಹೋಗಿದ್ದೇನೆ. ನನಗೆ ಎಲ್ಲಾ ದೇವಸ್ಥಾನಗಳೂ ಒಂದೇ, ಯಾರೋ ಒಬ್ಬ ರೇವಣ್ಣವರ ಮೇಲೆ ಆಪಾದನೆ ಮಾಡಿದ್ದಾರೆ. ಮಾಡಲಿ ಅವರು ದೊಡ್ಡವರು ನೋಡೋಣಾ ಎಂದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago