ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಎಚ್ಡಿಡಿ, ನಾನು ಕಾಂಗ್ರೆಸ್ ಗಾಗಿ ನನ್ನ ಜೀವನವನ್ನೇ ತೆತ್ತಿದ್ದೇನೆ.
ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ. ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು. ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಎಚ್.ಡಿ.ಡಿ, ಹಾಸನದಿಂದ ದೇವೇಗೌಡರು ನಿಲ್ಲಬೇಕು ಎಂದರು. ನಾನು ಕಳೆದಬಾರಿಯೇ ಹೇಳಿದ್ದೇನೆ, ನಾನು ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇನೆ. ನಾನು ವ್ಹೀಲ್ ಚೇರ್ ನಲ್ಲೇ ಬಂದೆ, ದೇವಾಲಯದಲ್ಲಿ ನಡೆದುಕೊಂಡೆ ಹೋದೆ. ದೇವೇಗೌಡರೆ ನೀವು 15 ಚುನಾವಣೆ ಕಳೆದಿದ್ದೀರಿ, ಜಾತ್ಯಾತೀತ ತತ್ವದ ಅಡಿಯಲ್ಲಿ ರಾಜಕೀಯ ಮಾಡಿದ್ದೀರಿ. ಈಗ ಏಕೆ ಮಾರ್ಪಾಡು ಮಾಡಿಕೊಂಡಿದ್ದೀರಿ ಎನ್ನುತ್ತಾರೆ. ಕುಮಾರಸ್ವಾಮಿ ಪ್ರತಿ ಪಂಚಾಯಿತಿಗೆ ಆಧುನಿಕ ಶಾಲೆ, ಆಸ್ಪತ್ರೆ ಕಟ್ಟುತ್ತೇನೆ ಎಂದರು.
ನಾನು ಈ ಜಿಲ್ಲೆಗೆ ಬಂದಿರೋದು ನನ್ನ ಮೊಮ್ಮಗನ್ನ ಗೆಲ್ಲಿಸೋದಕ್ಕಲ್ಲ, ಈ ಜಿಲ್ಲೆಯ ಅಭಿವೃದ್ಧಿಗಾಗಿ. ನಾವು ಏನು ಮೋಸ ಮಾಡಿದ್ದೇವೆ ಹೇಳಲಿ, ನಮ್ಮ ಸಮಾಜದವರನ್ನ ದೊಡ್ಡ ದೊಡ್ಡ ಸ್ಥಾನಕ್ಕೆ ಕಳಿಸಿದ್ದೇನೆ. ಅವರೆಲ್ಲಾ ಸೇರಿ ನಮ್ಮನ್ನ ಸೋಲಿಸಿದರು, ನಾನು ಕಾಂಗ್ರೆಸ್ ಗಾಗಿ ನನ್ನ ಜೀವನವನ್ನೇ ತೆತ್ತಿದ್ದೇನೆ. ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ ಎಂದರು.
ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು
ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ. ನಿಮಗೆ ಮೀಸಲಾತಿ ನೀಡಿದ್ದೇನೆ, ಖರ್ಗೆಯವರು ಒಮ್ಮೆ ಮಾತ್ರ ಮೀಸಲಾತಿ ಕೊಡೋಣಾ ಎಂದಿದ್ದರು. ನಾನು ಕೊಟ್ಟ ಮೀಸಲಾತಿಯನ್ನ ಇಲ್ಲಿಯವರೆಗೂ ತೆಗೆದು ಹಾಕಲಿಕ್ಕೆ ಆಗಿಲ್ಲ, ಬೆಟ್ಟದ ರಂಗನಾಥ ಸ್ವಾಮಿಗೆ ಹರಕೆ ಮಾಡಿಕೊಂಡ ನಂತರ ನಾನು ಹುಟ್ಟಿದ್ದೇನೆ. ಎಲ್ಲಾ ಸಮುದಾಯದ ದೇವಾಲಯಗಳಿಗೂ ಹೋಗಿದ್ದೇನೆ. ನನಗೆ ಎಲ್ಲಾ ದೇವಸ್ಥಾನಗಳೂ ಒಂದೇ, ಯಾರೋ ಒಬ್ಬ ರೇವಣ್ಣವರ ಮೇಲೆ ಆಪಾದನೆ ಮಾಡಿದ್ದಾರೆ. ಮಾಡಲಿ ಅವರು ದೊಡ್ಡವರು ನೋಡೋಣಾ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…