Featured

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ಅವರಿಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ

ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಎಚ್​ಡಿಡಿ, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ.

ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ. ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು. ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಎಚ್.ಡಿ.ಡಿ, ಹಾಸನದಿಂದ ದೇವೇಗೌಡರು ನಿಲ್ಲಬೇಕು ಎಂದರು. ನಾನು ಕಳೆದಬಾರಿಯೇ ಹೇಳಿದ್ದೇನೆ, ನಾನು ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇನೆ. ನಾನು ವ್ಹೀಲ್ ಚೇರ್ ನಲ್ಲೇ ಬಂದೆ, ದೇವಾಲಯದಲ್ಲಿ ನಡೆದುಕೊಂಡೆ ಹೋದೆ. ದೇವೇಗೌಡರೆ ನೀವು 15 ಚುನಾವಣೆ ಕಳೆದಿದ್ದೀರಿ, ಜಾತ್ಯಾತೀತ ‌ತತ್ವದ ಅಡಿಯಲ್ಲಿ ರಾಜಕೀಯ‌ ಮಾಡಿದ್ದೀರಿ. ಈಗ ಏಕೆ ಮಾರ್ಪಾಡು ಮಾಡಿಕೊಂಡಿದ್ದೀರಿ ಎನ್ನುತ್ತಾರೆ. ಕುಮಾರಸ್ವಾಮಿ ಪ್ರತಿ ಪಂಚಾಯಿತಿಗೆ ಆಧುನಿಕ ಶಾಲೆ, ಆಸ್ಪತ್ರೆ ಕಟ್ಟುತ್ತೇನೆ ಎಂದರು.

ನಾನು ಈ ಜಿಲ್ಲೆಗೆ ಬಂದಿರೋದು ನನ್ನ ಮೊಮ್ಮಗನ್ನ ಗೆಲ್ಲಿಸೋದಕ್ಕಲ್ಲ, ಈ ಜಿಲ್ಲೆಯ ಅಭಿವೃದ್ಧಿಗಾಗಿ. ನಾವು ಏನು ಮೋಸ ಮಾಡಿದ್ದೇವೆ ಹೇಳಲಿ, ನಮ್ಮ ಸಮಾಜದವರನ್ನ ದೊಡ್ಡ ದೊಡ್ಡ ಸ್ಥಾನಕ್ಕೆ ಕಳಿಸಿದ್ದೇನೆ. ಅವರೆಲ್ಲಾ ಸೇರಿ ನಮ್ಮನ್ನ ಸೋಲಿಸಿದರು, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ. ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ ಎಂದರು.

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ. ನಿಮಗೆ ಮೀಸಲಾತಿ ನೀಡಿದ್ದೇನೆ, ಖರ್ಗೆಯವರು ಒಮ್ಮೆ ಮಾತ್ರ ಮೀಸಲಾತಿ ಕೊಡೋಣಾ ಎಂದಿದ್ದರು. ನಾನು ಕೊಟ್ಟ ಮೀಸಲಾತಿಯನ್ನ ಇಲ್ಲಿಯವರೆಗೂ ತೆಗೆದು ಹಾಕಲಿಕ್ಕೆ ಆಗಿಲ್ಲ, ಬೆಟ್ಟದ ರಂಗನಾಥ ಸ್ವಾಮಿಗೆ ಹರಕೆ ಮಾಡಿಕೊಂಡ ನಂತರ‌ ನಾನು ಹುಟ್ಟಿದ್ದೇನೆ. ಎಲ್ಲಾ ಸಮುದಾಯದ ದೇವಾಲಯಗಳಿಗೂ ಹೋಗಿದ್ದೇನೆ. ನನಗೆ ಎಲ್ಲಾ ದೇವಸ್ಥಾನಗಳೂ ಒಂದೇ, ಯಾರೋ ಒಬ್ಬ ರೇವಣ್ಣವರ ಮೇಲೆ ಆಪಾದನೆ ಮಾಡಿದ್ದಾರೆ. ಮಾಡಲಿ ಅವರು ದೊಡ್ಡವರು ನೋಡೋಣಾ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago