ಉಡುಪಿ

ಕಾಪು : ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರಿಂದ ಲಕ್ಷಾಂತರ ಮೌಲ್ಯದ ಮೀನು ಕಳ್ಳತನ, ಹಲ್ಲೆ : ದೂರು ದಾಖಲು – vishwanews24

ಕಾಪು : ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರಿಂದ ಲಕ್ಷಾಂತರ ಮೌಲ್ಯದ ಮೀನು ಕಳ್ಳತನ, ಹಲ್ಲೆ – ದೂರು ದಾಖಲು

ಕಾಪು: ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಬಂದರಿನತ್ತ ವಾಪಾಸಾಗುತ್ತಿದ್ದ ಟ್ರಾಲ್ ಬೋಟ್ ನಲ್ಲಿದ್ದ ಮೀನನ್ನು ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರು ಡಕಾಯಿತಿ ನಡೆಸಿದ ಘಟನೆ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ದೂರದಲ್ಲಿ ನಡೆದಿದೆ.

ಮಂಗಳೂರು ಬಂದರಿನಿಂದ ಮಹಮ್ಮದ್ ಮುಸ್ತಾಫ್ ಎಂಬವರ ಬೋಟ್ ನಲ್ಲಿ ಆಂಧ್ರಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘುರಾಮಯ್ಯ, ಶಿವರಾಜ್, ಕೆ.ಶೀನು, ಏಳುಮಲೆ, ಚಿನ್ನೋಡು, ರಾಜುರವರು ಮಂಗಳೂರು ಬಂದರಿನಿಂದ ಹೊರಟಿದ್ದು, ಸಮುದ್ರದ ಒಳಭಾಗದಲ್ಲಿ ಮೀನುಗಳನ್ನು ಹಿಡಿದುಕೊಂಡು ಮಂಗಳೂರು ಬಂದರಿಗೆ ವಾಪಾಸ್ಸು ಹೋಗುತ್ತಿರುವಾಗ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ಮೈಲ್ ದೂರದಲ್ಲಿದ್ದಾಗ ಮುಂಭಾಗಕ್ಕೆ ಅಪರಿಚಿತ ಪರ್ಶಿಯನ್ ಬೋಟ್ ಬಂದಿದೆ.

ಹನುಮ ಜ್ಯೋತಿ ಎಂಬ ಹೆಸರಿನ ಪರ್ಶಿನ್ ಬೋಟ್ ನಲ್ಲಿದ್ದ 15-20 ಜನರ ಪೈಕಿ 7-8 ಜನರು ಟ್ರಾಲ್ ಬೋಟ್ಒಳಗೆ ಹತ್ತಿ ಬೋಟ್ ನಲ್ಲಿದ್ದ ಮೀನಿನ ಬಾಕ್ಸ್ ಗಳನ್ನುತೆಗೆದು, ಪರ್ಶಿನ್ ಬೋಟ್ ಗೆ ಹಾಕುತ್ತಿದ್ದರು. ಈ ವೇಳೆ ಅವರನ್ನು ತಡೆಯಲು ಹೋದ ಟ್ರಾಲ್ ಬೋಟ್ ನ ಮೀನುಗಾರರ ಪೈಕಿ ಶೀನು ಮತ್ತ ರಘು ರಾಮಯ್ಯರವರನ್ನು ಪರ್ಶಿನ್ ಬೋಟ್ ಪಕ್ಕದಲ್ಲಿ ಬಂದ 5-7 ಜನರಿದ್ದ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಫರ್ಶಿನ್ ಬೋಟ್ ನಲ್ಲಿದ್ದವರು ಟ್ರಾಲ್ ಬೋಟ್ ನಲ್ಲಿದ್ದ 6 ಜನ ಮೀನುಗಾರರಿಗೆ ಕೈಯಿಂದ ಹಾಗೂ ಮರದ ರೀಫ್ ನಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆಗೆ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದ ಶೀನು ಮತ್ತ ರಘು ರಾಮಯ್ಯ ರವರನ್ನು ವಾಪಸ್ಸು ಕರೆದುಕೊಂಡು ಬಂದು ಟ್ರಾಲ್ ಬೋಟ್ ಗೆ ಹಾಕಿ, ಮೀನುಗಾರರ 4 ಮೊಬೈಲ್ ಹಾಗೂ 2 ಲಕ್ಷ ಮೌಲ್ಯದ 12 ಬಾಕ್ಸ್ ಮೀನುಗಳನ್ನು ಡಕಾಯಿತಿ ಮಾಡಿ ಪರಾರಿಯಾಗಿದ್ದಾರೆ.

ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago