ಕಾಪು: ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಬಂದರಿನತ್ತ ವಾಪಾಸಾಗುತ್ತಿದ್ದ ಟ್ರಾಲ್ ಬೋಟ್ ನಲ್ಲಿದ್ದ ಮೀನನ್ನು ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರು ಡಕಾಯಿತಿ ನಡೆಸಿದ ಘಟನೆ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ದೂರದಲ್ಲಿ ನಡೆದಿದೆ.
ಮಂಗಳೂರು ಬಂದರಿನಿಂದ ಮಹಮ್ಮದ್ ಮುಸ್ತಾಫ್ ಎಂಬವರ ಬೋಟ್ ನಲ್ಲಿ ಆಂಧ್ರಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘುರಾಮಯ್ಯ, ಶಿವರಾಜ್, ಕೆ.ಶೀನು, ಏಳುಮಲೆ, ಚಿನ್ನೋಡು, ರಾಜುರವರು ಮಂಗಳೂರು ಬಂದರಿನಿಂದ ಹೊರಟಿದ್ದು, ಸಮುದ್ರದ ಒಳಭಾಗದಲ್ಲಿ ಮೀನುಗಳನ್ನು ಹಿಡಿದುಕೊಂಡು ಮಂಗಳೂರು ಬಂದರಿಗೆ ವಾಪಾಸ್ಸು ಹೋಗುತ್ತಿರುವಾಗ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ಮೈಲ್ ದೂರದಲ್ಲಿದ್ದಾಗ ಮುಂಭಾಗಕ್ಕೆ ಅಪರಿಚಿತ ಪರ್ಶಿಯನ್ ಬೋಟ್ ಬಂದಿದೆ.
ಹನುಮ ಜ್ಯೋತಿ ಎಂಬ ಹೆಸರಿನ ಪರ್ಶಿನ್ ಬೋಟ್ ನಲ್ಲಿದ್ದ 15-20 ಜನರ ಪೈಕಿ 7-8 ಜನರು ಟ್ರಾಲ್ ಬೋಟ್ಒಳಗೆ ಹತ್ತಿ ಬೋಟ್ ನಲ್ಲಿದ್ದ ಮೀನಿನ ಬಾಕ್ಸ್ ಗಳನ್ನುತೆಗೆದು, ಪರ್ಶಿನ್ ಬೋಟ್ ಗೆ ಹಾಕುತ್ತಿದ್ದರು. ಈ ವೇಳೆ ಅವರನ್ನು ತಡೆಯಲು ಹೋದ ಟ್ರಾಲ್ ಬೋಟ್ ನ ಮೀನುಗಾರರ ಪೈಕಿ ಶೀನು ಮತ್ತ ರಘು ರಾಮಯ್ಯರವರನ್ನು ಪರ್ಶಿನ್ ಬೋಟ್ ಪಕ್ಕದಲ್ಲಿ ಬಂದ 5-7 ಜನರಿದ್ದ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ.
ಬಳಿಕ ಫರ್ಶಿನ್ ಬೋಟ್ ನಲ್ಲಿದ್ದವರು ಟ್ರಾಲ್ ಬೋಟ್ ನಲ್ಲಿದ್ದ 6 ಜನ ಮೀನುಗಾರರಿಗೆ ಕೈಯಿಂದ ಹಾಗೂ ಮರದ ರೀಫ್ ನಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆಗೆ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದ ಶೀನು ಮತ್ತ ರಘು ರಾಮಯ್ಯ ರವರನ್ನು ವಾಪಸ್ಸು ಕರೆದುಕೊಂಡು ಬಂದು ಟ್ರಾಲ್ ಬೋಟ್ ಗೆ ಹಾಕಿ, ಮೀನುಗಾರರ 4 ಮೊಬೈಲ್ ಹಾಗೂ 2 ಲಕ್ಷ ಮೌಲ್ಯದ 12 ಬಾಕ್ಸ್ ಮೀನುಗಳನ್ನು ಡಕಾಯಿತಿ ಮಾಡಿ ಪರಾರಿಯಾಗಿದ್ದಾರೆ.
ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…