ಉಡುಪಿ

ಕಾಪು : ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರಿಂದ ಲಕ್ಷಾಂತರ ಮೌಲ್ಯದ ಮೀನು ಕಳ್ಳತನ, ಹಲ್ಲೆ : ದೂರು ದಾಖಲು – vishwanews24

ಕಾಪು : ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರಿಂದ ಲಕ್ಷಾಂತರ ಮೌಲ್ಯದ ಮೀನು ಕಳ್ಳತನ, ಹಲ್ಲೆ – ದೂರು ದಾಖಲು

ಕಾಪು: ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಬಂದರಿನತ್ತ ವಾಪಾಸಾಗುತ್ತಿದ್ದ ಟ್ರಾಲ್ ಬೋಟ್ ನಲ್ಲಿದ್ದ ಮೀನನ್ನು ಪರ್ಶಿಯನ್ ಬೋಟ್ ನಲ್ಲಿ ಬಂದ ಆಗಂತುಕರು ಡಕಾಯಿತಿ ನಡೆಸಿದ ಘಟನೆ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ದೂರದಲ್ಲಿ ನಡೆದಿದೆ.

ಮಂಗಳೂರು ಬಂದರಿನಿಂದ ಮಹಮ್ಮದ್ ಮುಸ್ತಾಫ್ ಎಂಬವರ ಬೋಟ್ ನಲ್ಲಿ ಆಂಧ್ರಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘುರಾಮಯ್ಯ, ಶಿವರಾಜ್, ಕೆ.ಶೀನು, ಏಳುಮಲೆ, ಚಿನ್ನೋಡು, ರಾಜುರವರು ಮಂಗಳೂರು ಬಂದರಿನಿಂದ ಹೊರಟಿದ್ದು, ಸಮುದ್ರದ ಒಳಭಾಗದಲ್ಲಿ ಮೀನುಗಳನ್ನು ಹಿಡಿದುಕೊಂಡು ಮಂಗಳೂರು ಬಂದರಿಗೆ ವಾಪಾಸ್ಸು ಹೋಗುತ್ತಿರುವಾಗ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ಮೈಲ್ ದೂರದಲ್ಲಿದ್ದಾಗ ಮುಂಭಾಗಕ್ಕೆ ಅಪರಿಚಿತ ಪರ್ಶಿಯನ್ ಬೋಟ್ ಬಂದಿದೆ.

ಹನುಮ ಜ್ಯೋತಿ ಎಂಬ ಹೆಸರಿನ ಪರ್ಶಿನ್ ಬೋಟ್ ನಲ್ಲಿದ್ದ 15-20 ಜನರ ಪೈಕಿ 7-8 ಜನರು ಟ್ರಾಲ್ ಬೋಟ್ಒಳಗೆ ಹತ್ತಿ ಬೋಟ್ ನಲ್ಲಿದ್ದ ಮೀನಿನ ಬಾಕ್ಸ್ ಗಳನ್ನುತೆಗೆದು, ಪರ್ಶಿನ್ ಬೋಟ್ ಗೆ ಹಾಕುತ್ತಿದ್ದರು. ಈ ವೇಳೆ ಅವರನ್ನು ತಡೆಯಲು ಹೋದ ಟ್ರಾಲ್ ಬೋಟ್ ನ ಮೀನುಗಾರರ ಪೈಕಿ ಶೀನು ಮತ್ತ ರಘು ರಾಮಯ್ಯರವರನ್ನು ಪರ್ಶಿನ್ ಬೋಟ್ ಪಕ್ಕದಲ್ಲಿ ಬಂದ 5-7 ಜನರಿದ್ದ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಫರ್ಶಿನ್ ಬೋಟ್ ನಲ್ಲಿದ್ದವರು ಟ್ರಾಲ್ ಬೋಟ್ ನಲ್ಲಿದ್ದ 6 ಜನ ಮೀನುಗಾರರಿಗೆ ಕೈಯಿಂದ ಹಾಗೂ ಮರದ ರೀಫ್ ನಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆಗೆ ನಾಡ ದೋಣಿಯಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದ ಶೀನು ಮತ್ತ ರಘು ರಾಮಯ್ಯ ರವರನ್ನು ವಾಪಸ್ಸು ಕರೆದುಕೊಂಡು ಬಂದು ಟ್ರಾಲ್ ಬೋಟ್ ಗೆ ಹಾಕಿ, ಮೀನುಗಾರರ 4 ಮೊಬೈಲ್ ಹಾಗೂ 2 ಲಕ್ಷ ಮೌಲ್ಯದ 12 ಬಾಕ್ಸ್ ಮೀನುಗಳನ್ನು ಡಕಾಯಿತಿ ಮಾಡಿ ಪರಾರಿಯಾಗಿದ್ದಾರೆ.

ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago