Featured

9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿ – vishwanews24

9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿ

ನವದೆಹಲಿ : ಭಾರತೀಯ ಮೂಲದ ಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ಕೇವಲ ಒಂದು ವಾರದ ಕಾರ್ಯನಿಮಿತ್ತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಅವರು, ತಾಂತ್ರಿಕ ದೋಷಗಳ ಕಾರಣದಿಂದಾಗಿ ನಿರೀಕ್ಷೆಗೂ ಮೀರಿದಂತೆ 9 ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲೇ ಸಿಲುಕಿದ್ದು, ಈ ಪಯಣ ಇತಿಹಾಸದಲ್ಲೇ ಅಪರೂಪದ ಘಟನೆಯಾಗಿ ದಾಖಲಾಗಿದೆ. ಅವರು ಡಿಸೆಂಬರ್ 31ರಂದು ನಾಸಾದಿಂದ ನಿವೃತ್ತರಾದರು.

ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಜೂನ್ 5, 2024 ರಂದು ಬೋಯಿಂಗ್‌ನ ಸ್ಟಾರ್‌ಲೈನರ್ ಕ್ಯಾಪ್ಸುಲ್ ಮೂಲಕ ISS ಗೆ ತೆರಳಿದ್ದರು. ಆದರೆ ಸ್ಟಾರ್‌ಲೈನರ್‌ನಲ್ಲಿ ಹೀಲಿಯಂ ಸೋರಿಕೆ ಮತ್ತು ಪ್ರೊಪಲ್ಷನ್ ವ್ಯವಸ್ಥೆಯ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಕಾರಣ, ಅವರು ಭೂಮಿಗೆ ವಾಪಸ್ ಬರಲು ಸಾಧ್ಯವಾಗಲಿಲ್ಲ. ಅನೇಕ ಬಾರಿ ಪ್ರಯತ್ನಿಸಿದರೂ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದ್ದು, ಅವರ ಭೂಮಿಗೆ ಮರಳುವ ಕನಸು ಮುಂದೂಡಲ್ಪಟ್ಟಿತ್ತು.

ಒಟ್ಟು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿದ ಬಳಿಕ, ಮಾರ್ಚ್ 18, 2025 ರಂದು ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ISS ನಿಂದ ಸ್ಪೇಸ್‌ಎಕ್ಸ್‌ನ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹೊರಟರು. 17 ಗಂಟೆಗಳ ಪ್ರಯಾಣದ ನಂತರ, ಮಾರ್ಚ್ 19ರಂದು ಭಾರತೀಯ ಕಾಲಮಾನ ಬೆಳಗ್ಗೆ 3.27ಕ್ಕೆ ಅಟ್ಲಾಂಟಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಈ ಪ್ರಯಾಣದಲ್ಲಿ ನಿಕ್ ಹೇಗ್ ಹಾಗೂ ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಅವರೊಂದಿಗೆ ಇದ್ದರು. ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್ ಭಾರತಕ್ಕೆ ಭೇಟಿ ನೀಡಿದ್ದು, ತಮ್ಮ ಸುರಕ್ಷಿತ ಮರಳಿಕೆಗಾಗಿ ಪ್ರಾರ್ಥಿಸಿದ ಭಾರತೀಯ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. “ಭಾರತದ ಜನರ ಪ್ರಾರ್ಥನೆ ಮತ್ತು ಪ್ರೀತಿಯೇ ನನಗೆ ದೊಡ್ಡ ಶಕ್ತಿ ನೀಡಿತು” ಎಂದು ಅವರು ಹೇಳಿದರು.

1965 ಸೆಪ್ಟೆಂಬರ್ 19ರಂದು ಓಹಿಯೋದ ಯೂಕ್ಲಿಡ್‌ನಲ್ಲಿ ಜನಿಸಿದ ಸುನೀತಾ ವಿಲಿಯಮ್ಸ್, ಗುಜರಾತ್ ಮೂಲದ ನರಶಸ್ತ್ರಚಿಕಿತ್ಸಕ ದೀಪಕ್ ಪಾಂಡ್ಯ ಮತ್ತು ಉರ್ಸುಲಿನ್ ಬೋನಿ ಪಾಂಡ್ಯ ದಂಪತಿಯ ಪುತ್ರಿ. ಅವರು ಯುನೈಟೆಡ್ ಸ್ಟೇಟ್ಸ್ ನೇವಲ್ ಅಕಾಡೆಮಿಯಿಂದ ಭೌತ ವಿಜ್ಞಾನದಲ್ಲಿ ಪದವಿ ಪಡೆದಿದ್ದು, ನಂತರ ಫ್ಲೋರಿಡಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಜಿನಿಯರಿಂಗ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಯುಎಸ್ ನೌಕಾಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಸೇವೆ ಸಲ್ಲಿಸಿದ ಅವರು, 30 ವರ್ಷಗಳ ವೃತ್ತಿಜೀವನದಲ್ಲಿ 3,000 ಗಂಟೆಗಳಿಗಿಂತ ಹೆಚ್ಚು ಹಾರಾಟ ಅನುಭವ ಹೊಂದಿದ್ದಾರೆ. 1998ರಲ್ಲಿ ನಾಸಾ ಗಗನಯಾತ್ರಿಯಾಗಿ ಆಯ್ಕೆಯಾದ ಸುನೀತಾ, ಎಕ್ಸ್‌ಪೆಡಿಶನ್ 14 ಮತ್ತು 15 ಸೇರಿದಂತೆ ಹಲವು ಪ್ರಮುಖ ಮಿಷನ್‌ಗಳಲ್ಲಿ ಭಾಗವಹಿಸಿದ್ದಾರೆ. 2007ರಲ್ಲಿ ಬಾಹ್ಯಾಕಾಶದಲ್ಲೇ ಮ್ಯಾರಥಾನ್ ಓಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯೂ ಅವರದ್ದು.

ದೀರ್ಘಕಾಲ ಬಾಹ್ಯಾಕಾಶದಲ್ಲಿ ಕಳೆದ ಅನುಭವವು ಗಗನಯಾತ್ರಿಗಳು ಎದುರಿಸುವ ಆರೋಗ್ಯ ಅಪಾಯಗಳನ್ನೂ ಮತ್ತೊಮ್ಮೆ ಎತ್ತಿಹಿಡಿದಿದೆ. ಸೂಕ್ಷ್ಮ ಗುರುತ್ವಾಕರ್ಷಣೆಯಿಂದ ಮೂಳೆ ನಷ್ಟ, ದೃಷ್ಟಿ ಸಮಸ್ಯೆಗಳು ಹಾಗೂ ವಿಕಿರಣದ ಪರಿಣಾಮಗಳು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು. ಆದರೂ ಈ ಎಲ್ಲ ಸವಾಲುಗಳನ್ನು ಮೀರಿ ಸುನೀತಾ ವಿಲಿಯಮ್ಸ್ ತಮ್ಮ ಧೈರ್ಯ ಮತ್ತು ಸಾಧನೆಗಳಿಂದ ಜಗತ್ತಿಗೆ ಪ್ರೇರಣೆಯಾಗಿ ಉಳಿದಿದ್ದಾರೆ. ಭಾರತ ಪ್ರವಾಸದ ವೇಳೆ ಅವರು ದಿವಂಗತ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ತಾಯಿಯನ್ನು ಭೇಟಿಯಾಗಿದ್ದು, ಈ ಕ್ಷಣ ಭಾವುಕವಾಗಿತ್ತು. ಕಲ್ಪನಾ ಚಾವ್ಲಾ ಬಾಹ್ಯಾಕಾಶಕ್ಕೆ ತೆರಳಿದ ಮೊದಲ ಭಾರತೀಯ ಮೂಲದ ಮಹಿಳೆಯಾಗಿದ್ದು, ಸುನೀತಾ ವಿಲಿಯಮ್ಸ್ ಅವರಿಗೂ ಸದಾ ಪ್ರೇರಣೆಯಾಗಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago