Featured

ಕುಂದಾಪುರ : ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ – vishwanews24

ಕುಂದಾಪುರ : ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ

ಕುಂದಾಪುರ: ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆಗೆ ವಿಫಲ ಯತ್ನ ನಡೆಸಿದ ದರೋಡೆಕೋರರನ್ನು ಬಂಧಿಸುವ ಮೂಲಕ ಜಿಲ್ಲೆಯಲ್ಲೇ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ಮೂಲತ: ಚಿಕ್ಕಮಗಳೂರು ಜಿಲ್ಲೆಯವನಾದ ಮುಂಬೈ ನಿವಾಸಿ ಸಂತೋಷ್‌ ನಾಯಕ್‌(45) ಹಾಗೂ ಮೂಲತ: ಉಡುಪಿ ಜಿಲ್ಲೆ ಕಾಪು ಪೊಲಿಪುವಿನ ಪ್ರಸ್ತುತ ಮುಂಬೈ ನಿವಾಸಿಯಾದ ದೇವರಾಜ್‌ ಸುಂದರ್‌ ಮೆಂಡನ್‌(46) ಬಂಧಿತ ಆರೋಪಿಗಳು.

ಈರ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಸ್ಥಳೀಯರು ಸೇರಿದಂತೆ ಹಲವರು ಭಾಗಿಯಾಗಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಉಳಿದ ಆರೋಪಿತರ ಪತ್ತೆಗಾಗಿ ಹುಡುಕಾಟ ನಡೆದಿದೆ.

ಏನಿದು ಪ್ರಕರಣ?

ಜು.25 ರಂದು ಬೆಳಿಗ್ಗೆ 8.30 ರ ವೇಳೆಯಲ್ಲಿ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಮಣೂರಿನ ನಿವಾಸಿ ಕವಿತಾ ಅವರ ಮನೆಯ ಗೇಟಿನ ಹೊರಗೆ ಶಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಸುಮಾರು 6 -8 ಜನ ಅಪರಿಚಿತರು ತಂಡ ಐಟಿ ಅಧಿಕಾರಿಗಳ ಸೋಗಿನಲ್ಲಿ ಅವರ ಮನೆಯ ಒಳ ನುಗ್ಗುವ ಪ್ರಯತ್ನ ಮಾಡಿತ್ತು. ಈ ತಂಡದಲ್ಲಿದ್ದವರು ಅಧಿಕಾರಿಗಳಂತೆ ದಿರಿಸು ಧರಿಸಿದ್ದಲ್ಲದೆ, ಒಬ್ಬ ಪೊಲೀಸ್ ಅಧಿಕಾರಿಯ ಸಮವಸ್ತ್ರವನ್ನು ಧರಿಸಿದ್ದನು. ಗೇಟಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದ ತಂಡ ವಿಫಲವಾದಾಗ ಮನೆಯ ಗೇಟನ್ನು ಹಾರಿ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನ ನಡೆಸಿತ್ತು.

ಮನೆಯ ಹೊರಗಡೆ ಅಳವಡಿಸಲಾದ ಸೈನ್ ಇನ್ ಸೆಕ್ಯೂರಿಟಿ ಸಿಸಿ ಕ್ಯಾಮರಾ ಕಣ್ಗಾವಲಿನ ತಂಡ ಅನುಮಾನಗೊಂಡು ಮನೆಯವರನ್ನು ಸಂಪರ್ಕಿಸಿ ಅಪಾಯದ ಮುನ್ಸೂಚನೆಗಳನ್ನು ನೀಡುವ ಪ್ರಯತ್ನ ನಡೆಸಿತ್ತು. ಈ ವೇಳೆ ಸೈನ್ ಇನ್ ಸೆಕ್ಯೂರಿಟಿ ಸಿಬ್ಬಂದಿಯ ಕರೆಗೆ ಮನೆಯವರಿಂದ ಸೂಕ್ತ ಸ್ಪಂದನ ದೊರಕದೆ ಇದ್ದಾಗ ಸಂಸ್ಥೆಯ ಮಾಲಿಕ ಕೃಷ್ಣ ಪೂಜಾರಿ ಸ್ವತ: ಕರೆ ಮಾಡಿ ಯಾವುದೇ ಕಾರಣಕ್ಕೂ ಮನೆಯ ಬಾಗಿಲು ತೆರೆಯದಂತೆ ಸೂಚಿಸಿದ್ದರು. ಮನೆಯ ಬಾಗಿಲು ತೆರೆಯುವ ವಿಫಲ ಪ್ರಯತ್ನ ನಡೆಸಿ ಸಫಲವಾಗದೆ ಇದ್ದಾಗ ತಂಡ ಬರಿಗೈಲಿ ವಾಪಾಸಾಗಿತ್ತು.

ದರೋಡೆಯ ವಿಫಲ ಯತ್ನ ನಡೆಸಿದ್ದ ಅಪರಿಚಿತರ ತಂಡ ಸಾಸ್ತಾನ ಟೋಲ್ ಗೇಟ್‌ನಲ್ಲಿ ಸಾಗದೆ ಬಾರ್ಕೂರು ಮೂಲಕ ಪರಾರಿಯಾಗಿರುವ ಅಂಶ ಪೊಲೀಸ್ ತನಿಖೆಯ ವೇಳೆ ಬಯಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಕೋಟ ಪೊಲೀಸ್ ಠಾಣೆಯ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಗಳ ಆಧಾರದಲ್ಲಿ ಅಪರಿಚಿತ ಅರೋಪಿಗಳ ಜಾಲ ಹುಡುಕಲು ಮುಂದಾಗಿದ್ದರು. ಎಸ್‌.ಪಿ ಡಾ.ಅರುಣ್ ಅವರ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಂ ನೇತೃತ್ವದಲ್ಲಿ ಕೋಟ ಠಾಣಾ ಎಸ್‌ಐಗಳಾದ ಗುರುನಾಥ ಬಿ ಹಾದಿಮನಿ ಹಾಗೂ ಸುಧಾಪ್ರಭು, ಹಿರಿಯಡ್ಕ ಠಾಣಾ ಎಸ್‌ಐ ಮಂಜುನಾಥ ಅವರನ್ನು ಒಳಗೊಂಡ ಪ್ರತ್ಯೇಕ 3 ತಂಡಗಳನ್ನು ರಚಿಸಲಾಗಿತ್ತು. ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಮುಂಬೈ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಆರೋಪಿಗಳ ಚಲನವಲನಗಳನ್ನು ಪತ್ತೆ ಮಾಡಿದ್ದ ಪೊಲೀಸರ ತಂಡ ಮುಂಬೈಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಆರೋಪಿತರು ಸ್ಥಳೀಯರ ಸಹಕಾರ ಪಡೆದುಕೊಂಡು, ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ಮಾಡುವ ಸಂಚು ರೂಪಿಸಿದ್ದರು ಎನ್ನುವ ಅಂಶಗಳು ಬೆಳಕಿಗೆ ಬಂದಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago