Featured

ಕಾಪು :ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ – vishwanews24

ಕಾಪು :ವಖ್ಫ್ ಆಸ್ತಿಗೆ ಕೈ ಹಾಕದಿರಿ,ಬೆಂಕಿಯಲ್ಲಿ ಕೈ ಸುಟ್ಟು ಕೊಳ್ಳುವಿರಿ”  ಘೋಷಣೆ ಕೂಗುವ ಮೂಲಕ ಆಕ್ರೋಶ ..

ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವರ್ಗದ ಜನರನ್ನು ಹತ್ತಿಕ್ಕಲು ಮುಂದಾಗಿದೆ : SDPI ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ

ವಕ್ಫ್ ಇದು ಅಲ್ಲಾಹನ ಆಸ್ತಿ ಅಲ್ಲಾಹನ ಆಸ್ತಿಯಾಗಿ ಉಳಿಯಲಿದೆ : SDPI ಉಪಾಧ್ಯಕ್ಷ ಹನೀಫ್ ಮೂಳೂರು

ವಕ್ಫ್ ಆಸ್ತಿಯ ಉಳಿವಿಗಾಗಿ ಎಲ್ಲಾ ರೀತಿಯ ತ್ಯಾಗಕ್ಕೂ ಸಿದ್ಧ :ದಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

ಕಾಪು: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್ಡಿಪಿಐ ಕಾಪು ಕ್ಷೇತ್ರ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಸಭೆಯಲ್ಲಿ ಎಸ್.ಡಿ.ಪಿ.ಐ. ಉಡುಪಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಪ್ರಸ್ತಾವಿಕ ಮಾತಾನಾಡಿ ಮುಸ್ಲಿಂ ಸಮುದಾಯವನ್ನು ಧಾರ್ಮಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಕಡೆಗಣಿಸಿರುವ ಕೇಂದ್ರ ಸರ್ಕಾರ ಹಂತ ಹಂತವಾಗಿ ಇಂತಹ ಕಾನೂನು ಕಟ್ಟಳೆಗಳ ಮೂಲಕ ಕೆಳವರ್ಗದ ಮತ್ತು ಅಲ್ಪಸಂಖ್ಯಾತ ವರ್ಗದ ಜನರನ್ನು ಹತ್ತಿಕ್ಕಲು ಮುಂದಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನಾಕರನ್ನು ಉದ್ದೇಶಿ ಮಾತಾನಾಡಿದ ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹನೀಫ್ ಮೂಳೂರು ವಕ್ಫ್ ಇದು ಅಲ್ಲಾಹನ ಆಸ್ತಿ ಅಲ್ಲಾಹನ ಆಸ್ತಿಯಾಗಿ ಉಳಿಯಲಿದೆ. ವಕ್ಫ್ ಆಸ್ತಿ ಕಬಳಿಸುವ ನಡೆ ಮುಸ್ಲಿಂ ದ್ವೇಷದ ಮುಂದುವರಿದ ಭಾಗವಾಗಿದೆ. ನಾವು ಭಾರತೀಯರು ನಿಮ್ಮ ದ್ವೇಷದ ರಾಜಕೀಯಕ್ಕೆ ಮೂರ್ಖರಾಗದೆ, ನಿಮ್ಮನ್ನು ಬುಡ ಸಮೇತ ಕಿತ್ತು ಹಾಕುವುದೇ ನಮ್ಮ ಧ್ಯೇಯ ಎಂದು ಹೇಳಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿ ಮಾತಾನಾಡಿದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈತರು, ಅಲ್ಪಸಂಖ್ಯಾತರನ್ನು ಹತ್ತಿಕ್ಕಲು ಪ್ರಯತ್ನ ಸಾಗಿಸುತ್ತಲೇ ಇದೆ. ಇದೀಗ ಮುಸ್ಲಿಮರನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ವಕ್ಫ್ ಆಸ್ತಿಯ ಮೇಲೆ ಕಣ್ಣಿಟ್ಟಿದೆ. ಇದು ಸಂಘಪರಿವಾರದ ಹಿಡೆನ್ ಅಜೆಂಡಾ ಆಗಿದೆ. ಮುಸ್ಲಿಮರ ಸಬಲೀಕರಣಕ್ಕೆ ಮೀಸಲಿಟ್ಟಿರುವ ವಕ್ಫ್ ಸೊತ್ತನ್ನು ಕಬಳಿಸಲು ಯಾವುದೇ ಕಾರಣಕ್ಕೂ ನಾವು ಅವಕಾಶ ನೀಡುವುದಿಲ್ಲ. ವಕ್ಫ್ ಆಸ್ತಿಯ ಉಳಿವಿಗಾಗಿ ಎಲ್ಲಾ ರೀತಿಯ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ, “ವಖ್ಫ್ ಆಸ್ತಿಗೆ ಕೈ ಹಾಕದಿರಿ,ಬೆಂಕಿಯಲ್ಲಿ ಕೈ ಸುಟ್ಟು ಕೊಳ್ಳುವಿರಿ” ಎನ್ನುವ ಘೋಷಣೆಗಳನ್ನು ಕೂಗುವ ಮೂಲಕ ವಕ್ಫ್ ಬೋರ್ಡ್ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ನವಾಝ್ ಉಚ್ಚಿಲ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾಧಿಕ್ ಕೆ.ಪಿ, ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಕಂಚಿನಡ್ಕ್, ಜಿಲ್ಲಾ ಸಮಿತಿ ಸದಸ್ಯರಾದ ಇಬ್ರಾಹಿಂ ಆರ್ಶ್, ರಝಾಕ್ ವೈ.ಎಸ್. ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

16 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

17 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

17 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

17 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

17 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

18 hours ago