Featured

ಕಲ್ಜಿಗದಲ್ಲಿ ದೈವಕ್ಕೆ ಅಪಚಾರ : ಸಿನೆಮಾ ನೋಡಿ ಆಮೇಲೆ ಮಾತನಾಡಿ ಎಂದ ಸಿನೆಮಾ ತಂಡ – vishwanews24

ಕಲ್ಜಿಗದಲ್ಲಿ ದೈವಕ್ಕೆ ಅಪಚಾರ : ಸಿನೆಮಾ ನೋಡಿ ಆಮೇಲೆ ಮಾತನಾಡಿ ಎಂದ ಸಿನೆಮಾ ತಂಡ

ಮಂಗಳೂರು: ಕಲ್ಜಿಗ ಸಿನೆಮಾದಲ್ಲಿ ದೈವಕ್ಕೆ ಅಪಚಾರ ಮಾಡಲಾಗಿದೆ ಎಂಬ ಅಪಪ್ರಚಾರದ ಬಗ್ಗೆ ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಸಿನೆಮಾ ನೋಡದ ಜನರು ಹಾಗೂ ಒಂದು ವರ್ಗದ ಜನರು ಈ ರೀತಿಯಾಗಿ ಅಪಪ್ರಚಾರ ಮಾಡ್ತಾ ಇದ್ದಾರೆ. ಆದ್ರೆ ಸಿನೆಮಾ ವೀಕ್ಷಿಸಿದ ಪ್ರೇಕ್ಷಕರು ಸಿನೆಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸಿದ್ದಾರೆ ಎಂದು ವಿವರಿಸಿದೆ. ಕಲ್ಜಿಗ ಸಿನೆಮಾದಲ್ಲಿ ದೈವಕ್ಕೆ ಅಪಚಾರ ಆಗಿದೆ ಎಂದು ಆರೋಪ ಮಾಡುವವರು ಮೊದಲು ಸಿನೆಮಾ ನೋಡಿ ಆಮೇಲೆ ಮಾತನಾಡಿ ಎಂದು ಹೇಳಿದ್ದಾರೆ.

ಕಲ್ಜಿಗ ಸಿನೆಮಾ ನಿರ್ದೇಶಕ ಸುಮನ್ ಸುವರ್ಣ ಅವರು ಮಾತನಾಡಿ ಸಿನೆಮಾದಿಂದ ದೈವದ ಮೇಲಿನ ಭಯ ಭಕ್ತಿ ಹೆಚ್ಚಾಗಿದೆ ಅಂತ ಸಿನೆಮಾ ವೀಕ್ಷಿಸಿದವರು ಹೇಳಿದ್ದಾರೆ. ನಮಗೆ ಪ್ರೇಕ್ಷಕರ ಅಭಿಪ್ರಾಯ ಮುಖ್ಯವಾಗಿದ್ದು, ಉತ್ತಮ ಸಿನೆಮಾ ಮಾಡಬೇಕು ಅನ್ನೋ ಹಂಬಲ ನೆರವೇರಿದೆ ಎಂದು ಹೇಳಿದ್ದಾರೆ.

ಚಿತ್ರದ ನಿರ್ಮಾಪಕ ಶರತ್ ಕುಮಾರ್ ಎ.ಕೆ. ಮಾತನಾಡಿ, ಸಿನೆಮಾದಲ್ಲಿ ಕೊರಗಜ್ಜನ ದೃಶ್ಯ ತೆಗೆಯುವಂತೆ ದೈವಾರಾಧನಾ ರಕ್ಷಣಾ ಸಮಿತಿ ಮನವಿ ಮಾಡಿದೆ. ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಅದೊಂದು ದೃಶ್ಯ ಬೇಡ ಎಂದಷ್ಟೇ ಹೇಳಿದ್ದಾರೆ. ಆದ್ರೆ ಮೂರು ದಿನದಲ್ಲಿ 15 ಸಾವಿರ ಜನ ಸಿನೆಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರೆಲ್ಲರೂ ಸಿನೆಮಾ ಮೆಚ್ಚಿಕೊಂಡಿದ್ದು, ವಿರೋಧಿಸುವವರು ಕೇವಲ ಒಂದು ಸೀನ್‌ ಮಾತ್ರ ವಿರೋಧಿಸ್ತಾ ಇದ್ದಾರೆ. ಸಿನೆಮಾ ನೋಡದೆ ವಿರೋಧ ಮಾಡುವವರಿಗೆ ಒಂದು ಶೋ ವ್ಯವಸ್ಥೆ ಮಾಡುತ್ತೇವೆ ಬಳಿಕ ಅವರು ಅಭಿಪ್ರಾಯ ತಿಳಿಸಲಿ ಎಂದು ಹೇಳಿದ್ದಾರೆ.

ನಾಯಕ ನಟ ಅರ್ಜುನ್ ಕಾಪಿಕಾಡ್ ಸೇರಿದಂತೆ ಸಿನೆಮಾ ತಂಡದ ಎಲ್ಲರೂ ಸಿನೆಮಾದಲ್ಲಿ ದೈವದ ದೃಶ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಎಲ್ಲೂ ದೈವಕ್ಕೆ ಅಪಚಾರ ಸಿನೆಮಾದಲ್ಲಿ ಆಗಿಲ್ಲದೇ ಇದ್ರೂ ವಿನಾ ಕಾರಣ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

14 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

16 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

16 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

16 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

16 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

16 hours ago