ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನಿವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್ಭೂಷಣ್ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ.
ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು ನ್ಯಾಯಪೀಠ ಹೇಳಿದೆ.
ಯಾವುದಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.
ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…