ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನಿವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್ಭೂಷಣ್ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ.
ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು ನ್ಯಾಯಪೀಠ ಹೇಳಿದೆ.
ಯಾವುದಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.
ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…