ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನಿವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್ಭೂಷಣ್ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ.
ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು ನ್ಯಾಯಪೀಠ ಹೇಳಿದೆ.
ಯಾವುದಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.
ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…