ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಬಗ್ಗೆ ಇಂದು ಮಹತ್ವದ ತೀರ್ಪು ನೀಡಿದ್ದು, ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ತಾತ್ಕಾಲಿಕವಾಗಿದ್ದು, ಅದನ್ನು ರದ್ದು ಮಾಡುವ ಅಧಿಕಾರವು ರಾಷ್ಟ್ರಪತಿಗಳಿಗಿದೆ ಎಂದು ಹೇಳಿದೆ.
ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಹಲವು ಸೂಚನೆಗಳನ್ನೂ ಸರ್ವೋಚ್ಛ ಪೀಠ ನೀಡಿದೆ. ಜಮ್ಮು ಕಾಶ್ಮೀರ ಮರು ಸಂಘಟನಾ ಕಾಯ್ದೆಯಡಿ ಕಿತ್ತುಕೊಂಡಿರುವ ರಾಜ್ಯ ಸ್ಥಾನಮಾನವನ್ನು ಮರಳಿ ನೀಡಬೇಕು ಎಂದಿದೆ. 2019ರಿಂದ ಜಮ್ಮು ಕಾಶ್ಮೀರವು ಕೇಂದ್ರಾಡಳಿತ ಪ್ರದೇಶವಾಗಿದೆ.
ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಮರುಸಂಘಟನೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಶಾಸನಸಭೆಗೆ ಚುನಾವಣೆ ನಡೆಸುವುದನ್ನು ನಿಯಂತ್ರಣದಲ್ಲಿರಿಸಬಾರದು. 2024ರ ಸೆಪ್ಟೆಂಬರ್ 30 ರೊಳಗೆ ಜಮ್ಮು ಕಾಶ್ಮೀರದ ಶಾಸನಸಭೆಗೆ ಚುನಾವಣೆಗಳನ್ನು ನಡೆಸಲು ಭಾರತದ ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಡಿಸೆಂಬರ್ 2018 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಿಸಲಾದ ರಾಷ್ಟ್ರಪತಿ ಆಳ್ವಿಕೆಯ ಸಿಂಧುತ್ವವನ್ನು ಅರ್ಜಿದಾರರು ನಿರ್ದಿಷ್ಟವಾಗಿ ಪ್ರಶ್ನಿಸದ ಕಾರಣ ತೀರ್ಪು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…