BIG BREAKING NEWS ಡಿಸೆಂಬರ್ 27 ಕಾಪು ಪುರಸಭಾ ಚುನಾವಣೆ ದಿನಾಂಕ ಘೋಷಣೆ : vishwanews24
ಕಾಪು: ಸದ್ಯ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ (MLC Election) ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ
ಘೋಷಣೆಯಾಗಿದೆ.
ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (Local Body Elections) ದಿನಾಂಕವನ್ನು ರಾಜ್ಯ ಆಯೋಗ ಚುನಾವಣೆ (Karnataka Election Commission) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.
ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ. ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿಯಾಗಲಿದೆ.
ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆ ಚುನಾವಣೆ ದಿನಾಂಕಡಿಸೆಂಬರ್ 13 ಚುನಾವಣಾ ಅಧಿಸೂಚನೆಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಡಿಸೆಂಬರ್ 27 ಮತದಾನಡಿಸೆಂಬರ್ 30 ಫಲಿತಾಂಶ ಬರಲಿದೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…